ಚಂಪಾವತ್, ಉತ್ತರಾಖಂಡ: ಉತ್ತರಾಖಂಡದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸುತ್ತಿದೆ. ಈ ಮಧ್ಯೆ ಮಾ ಪೂರ್ಣಗಿರಿ ಧಾಮಕ್ಕೆ ಭೇಟಿ ನೀಡಲು ಬಂದ ಸಾವಿರಾರು ಯಾತ್ರಾರ್ಥಿಗಳು ಬಾಟನಗಡ ನಾಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಬಳಿಕ ಟನಕಪುರ್ ತಾಲೂಕು ಆಡಳಿತ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಯಾತ್ರಾ ಮಾರ್ಗದಲ್ಲಿ ಸಿಲುಕಿಕೊಂಡಿದ್ದ 5 ಸಾವಿರಕ್ಕೂ ಅಧಿಕ ಭಕ್ತರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಭಾರೀ ಮಳೆ ಸಮಸ್ಯೆಯಾಗಿ ಪರಿಣಮಿಸಿದೆ: ಈ ಭಾಗದ ಪರ್ವತ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ, ಟನಕ್ಪುರ ಪೂರ್ಣಗಿರಿ ಯಾತ್ರೆ