ದೇಶದಲ್ಲೇ ಮೊದಲ ಬಾರಿಗೆ, ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಮತ್ತು ಹೊರಗುತ್ತಿಗೆ ನೌಕರರನ್ನು ಒಳಗೊಂಡಂತೆ ಆರೋಗ್ಯ ಭದ್ರತೆಯನ್ನು ಒದಗಿಸುವ ನವೀನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ರೂ.5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಯ ಸೌಲಭ್ಯವನ್ನು ಕಲ್ಪಿಸಲಾಗಿದೆ.Fflirtygo Men Graphic Print Cotton T-Shirt & Short Set for Men/Boys
ಇದರಿಂದ ಸರ್ಕಾರಿ ಸಿಬ್ಬಂದಿಗೆ ಸಮಗ್ರ ಆರೋಗ್ಯ ರಕ್ಷಣೆ ಒದಗಲಿದೆ. ಈ ಕ್ರಮವು ಸರ್ಕಾರಿ ನೌಕರರ ಯೋಗಕ್ಷೇಮಕ್ಕೆ ರಾಜ್ಯ ಸರ್ಕಾರದ ಕಾಳಜಿಯನ್ನು ತೋರಿಸುತ್ತದೆ, ಜೊತೆಗೆ ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದೆ.
ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಇನ್ನಷ್ಟು ಜನಪರ, ದಕ್ಷತೆಯಿಂದ ಮತ್ತು ಸಮರ್ಪಣೆಯಿಂದ ಕೆಲಸ ಮಾಡುವಂತೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಆರೋಗ್ಯ ಭದ್ರತಾ ಯೋಜನೆಯು ನೌಕರರಿಗೆ ಆರ್ಥಿಕ ಒತ್ತಡವಿಲ್ಲದೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯಲು ಅನುವು ಮಾಡಿಕೊಡುತ್ತದೆ, ಇದರಿಂದ ಅವರ ಕಾರ್ಯಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಲು ಸಹಾಯವಾಗಲಿದೆ.ಇದನ್ನು ಓದಿ-ರಿಷಭ್ ಶೆಟ್ಟಿ ಅವರಿಂದ ಕೆರಾಡಿಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನದ ಆಚರಣೆ: ಅಲ್ಲೆ ಯಾಕೆ.? ಇಲ್ಲಿದೆ ಮಾಹಿತಿ
ಸ್ವಾಭಿಮಾನ, ಸ್ವಾವಲಂಬನೆ, ಮತ್ತು ಘನತೆಯ ಬದುಕು ಸ್ವಾತಂತ್ರ್ಯದ ನೈಜ ಆಶಯವಾಗಿದೆ. ಈ ಆಶಯವನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರವು ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ, ಮತ್ತು ಈ ಯೋಜನೆಯು ಆ ದಿಶೆಯಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಕ್ರಮವು ನೌಕರರ ಜೀವನದ ಗುಣಮಟ್ಟವನ್ನು ಸುಧಾರಿಸುವುದರ ಜೊತೆಗೆ, ಸರ್ಕಾರದ ಸೇವೆಗಳನ್ನು ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಾಯ ಮಾಡಲಿದೆ.