Skip to main content
ವಿಡಿಯೋ
politics

ಪ್ರಧಾನಿ ಮೋದಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಣಿಪುರಕ್ಕೆ ಎಂಟ್ರಿ - ಜನಾಂಗೀಯ ಸಂಘರ್ಷದ ಬಳಿಕ ಮೊದಲ ಭೇಟಿ..!

By Vinutha U
ಪ್ರಧಾನಿ ಮೋದಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಣಿಪುರಕ್ಕೆ ಎಂಟ್ರಿ - ಜನಾಂಗೀಯ ಸಂಘರ್ಷದ ಬಳಿಕ ಮೊದಲ ಭೇಟಿ..!

ಪ್ರಧಾನಿ ಮೋದಿ ಇದುವರೆಗೆ ಮಣಿಪುರಕ್ಕೆ ಭೇಟಿ ನೀಡದಿರುವ ಬಗ್ಗೆ ವಿಪಕ್ಷಗಳು ಸಂಸತ್ತಿನಲ್ಲಿ ಮತ್ತು ಇತರ ವೇದಿಕೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿವೆ.

ನವದೆಹಲಿ - ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಜನಾಂಗೀಯ ಸಂಘರ್ಷದ ಬಳಿಕ ಪ್ರಧಾನಿಗಳು ಭೇಟಿ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿದೆ.

2023 ರಲ್ಲಿ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದ ಬಳಿಕ ಇದು ಅವರ ಮೊದಲ ಭೇಟಿಯಾಗಿದ್ದು, 28 ತಿಂಗಳ ನಂತರ ಈ ಭೇಟಿಯು ಮಹತ್ವದ್ದಾಗಿದೆ. ಈ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಜಧಾನಿ ಇಂಫಾಲ್ ಮತ್ತು ಚುರಾಚಾಂದ್‌ಪುರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಮಣಿಪುರದಲ್ಲಿ 2023 ರಿಂದ ಕುಕಿ ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷದಿಂದಾಗಿ ಗಲಭೆ, ಹಿಂಸಾಚಾರ ಮತ್ತು ಜಾತಿ ಸಮುದಾಯಗಳ ನಡುವೆ ತೀವ್ರ ಉದ್ವಿಗ್ನತೆ ಉಂಟಾಗಿತು. ಈ ಸಂಘರ್ಷದಿಂದಾಗಿ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಕೇಂದ್ರ ಸರ್ಕಾರದ ಕ್ರಮಗಳನ್ನು ವಿಪಕ್ಷಗಳು ಸತತವಾಗಿ ಟೀಕಿಸಿವೆ. ಪ್ರಧಾನಿ ಮೋದಿ ಇದುವರೆಗೆ ಮಣಿಪುರಕ್ಕೆ ಭೇಟಿ ನೀಡದಿರುವ ಬಗ್ಗೆ ವಿಪಕ್ಷಗಳು ಸಂಸತ್ತಿನಲ್ಲಿ ಮತ್ತು ಇತರ ವೇದಿಕೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿವೆ.

ಪ್ರಧಾನಿ ಮೋದಿ ಅವರ ಈ ಭೇಟಿಯನ್ನು ರಾಜಕೀಯವಾಗಿ ಮಹತ್ವ ಎಂದು ಪರಿಗಣಿಸಲಾಗಿದೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಶಾಂತಿ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಮುಖ ಘೋಷಣೆಗಳು ಮತ್ತು ಮೂಲಸೌಕರ್ಯ ಯೋಜನೆಗಳ ಉದ್ಘಾಟನೆಯನ್ನು ನಿರೀಕ್ಷಿಸಲಾಗಿದೆ. ಈ ಭೇಟಿಯಿಂದ ರಾಜ್ಯದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಗುರಿಯಿದೆ ಎಂದು ಮೂಲಗಳು ತಿಳಿಸಿವೆ.

YOHO Bubbles Men Ortho slippers | Soft comfortable and stylish flip flop slippers for Men in exciting colors |Lightweight | Anti Skid | Daily Use Chappal

ವಿಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್, ಪ್ರಧಾನಿ ಮೋದಿಯವರ ಈ ಭೇಟಿಯನ್ನು "ತಡವಾದ ಕ್ರಮ" ಎಂದು ವಿಮರ್ಶಿಸಿವೆ. ರಾಜ್ಯದಲ್ಲಿ ಜನಾಂಗೀಯ ಸಂಘರ್ಷ ತೀವ್ರವಾಗಿದ್ದಾಗ ಪ್ರಧಾನಿಯವರು ಭೇಟಿ ನೀಡದಿರುವುದು ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ವಿಪಕ್ಷಗಳು ದೂರಿವೆ.

ಈ ಭೇಟಿಯ ಸಂದರ್ಭದಲ್ಲಿ ಕಟ್ಟುನಿಟ್ಟಾದ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗುವುದು ಎಂದು ವರದಿಗಳು ತಿಳಿಸಿವೆ. ಈ ಭೇಟಿಯು ರಾಜ್ಯದ ಜನರಿಗೆ ಆತ್ಮವಿಶ್ವಾಸವನ್ನು ತುಂಬುವ ಜೊತೆಗೆ, ಸಂಘರ್ಷದಿಂದ ಉಂಟಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಕಾಳಜಿಯನ್ನು ತೋರಿಸುವ ಉದ್ದೇಶವನ್ನು ಹೊಂದಿದೆ.