Skip to main content
ವಿಡಿಯೋ
politics

ಮುಡಾ ಪ್ರಕರಣ: ಸತತ 7ನೇ ಬಾರಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿಯ ವಿಚಾರಣೆ ಮುಂದೂಡಿದ ಹೈಕೋರ್ಟ್‌

By Gireesh Vasishta
ಮುಡಾ ಪ್ರಕರಣ: ಸತತ 7ನೇ ಬಾರಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿಯ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಭೂಮಿಯ ಮಾಲೀಕ ಜೆ. ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ ರಾಜೇಶ್‌ ರೈ ಅವರ ವಿಭಾಗೀಯ ಪೀಠ ನಡೆಸಿತು.

ಮುಡಾ ಪ್ರಕರಣ: ಸತತ 7ನೇ ಬಾರಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿಗಳ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್ಅನುಮತಿಸಿರುವುದನ್ನು ಕರ್ನಾಟಕ ಹೈಕೋರ್ಟ್ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನವೆಂಬರ್ಎರಡನೇ ವಾರಕ್ಕೆ ಕರ್ನಾಟಕ ಹೈಕೋರ್ಟ್ಮುಂದೂಡಿದೆ. ಇದರೊಂದಿಗೆ ಸತತ 7ನೇ ಬಾರಿಗೆ ಪ್ರಕರಣದ ವಿಚಾರಣೆ ಮುಂದೂಡಿದಂತಾಗಿದೆ. ಪ್ರತಿವಾದಿಗಳಿಗೆ ನೋಟಿಸ್ಜಾರಿ ಮಾಡುವ ಪ್ರಕ್ರಿಯೆ ಮಾತ್ರ ಪೂರ್ಣಗೊಂಡಿದೆ.Levi's Men's Slim Fit Mid Rise 511 Mid-Rise Jeans

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಭೂಮಿಯ ಮಾಲೀಕ ಜೆ. ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ ರಾಜೇಶ್ರೈ ಅವರ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ಜನರಲ್ಕೆ. ಶಶಿಕಿರಣ್ಶೆಟ್ಟಿ ಅವರುಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆಎಂದರು. ಯುಎಸ್‌ನ “ನಾವಿಕ” ಈವೆಂಟ್‌ನಲ್ಲಿ ರಕ್ಷಿತ್ ಶೆಟ್ಟಿ ಮಾತು: ತಮ್ಮ ಮುಂದಿನ ಸಿನಿಮಾದ ಬಗ್ಗೆ ಈ ರೀತಿಯಾಗಿ ಹೇಳಿದರು: ಅಚ್ಚರಿ ಮಾಹಿತಿ ಹೀಗಿದೆ


ಆಗ ಪೀಠವು ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಹೀಗಾಗಿ, ನವೆಂಬರ್ಮೊದಲ ವಾರದಲ್ಲಿ ಅರ್ಜಿ ನಡೆಸಬಹುದೇಎಂದರು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ಅವರು ನವೆಂಬರ್ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು.