ಧರ್ಮಸ್ಥಳ ಪ್ರಕರಣ ವಿಚಾರ: ಆರೋಪಿ ಚಿನ್ನಯ್ಯಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಬೆಂಗಳೂರು,ಸೆಪ್ಟಂಬರ್-06: ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳ್ತಂಗಡಿ ತಾಲ್ಲೂಕು ನ್ಯಾಯಾಲಯ ಆದೇಶ ಹೊರಡಿಸಿದೆ.YUISI Sun Hat for Men Women, Breathable Summer Hat for Travel, Hiking, Gardening, Sun Hats for Men & Round Sun Cap for Hiking, Hats for Women Indoor Outdoor Activities
ಆರೋಪಿ ಚಿನ್ನಯ್ಯನ 15 ದಿನಗಳ SIT ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಭದ್ರತಾ ದೃಷ್ಠಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ ಆದರೆ ಈ ಹಿಂದೆ ಚಿನ್ನಯ್ಯ SIT ವಿಚಾರಣೆ ಸಮಯದಲ್ಲಿ ಎಲ್ಲಾ ಸತ್ಯಗಳನ್ನು ಬಾಯ್ಬಿಟ್ಟಿರುವುದಾಗಿ ತಿಳಿದುಬಂದಿತ್ತು.ಸೆಪ್ಟೆಂಬರ್ 7, 2025 ರಲ್ಲಿ ಈ ವರ್ಷದ ಕಡೆಯ ಚಂದ್ರ ಗ್ರಹಣ("ಬ್ಲಡ್ ಮೂನ್"): ವೀಕ್ಷಣೆ ಹೇಗೆ? ಗ್ರಹಗತಿಗಳ ಮೇಲೆ ಪರಿಣಾಮ ಏನು? ಇಲ್ಲಿದೆ ಮಾಹಿತಿ
ಹೀಗಾಗಿ, ಮತ್ತೆ SIT ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಪಡೆಯುವ ಅವಶ್ಯಕತೆ ಇರುವುದಿಲ್ಲೆಂದು ತಿಳಿದುಬಂದಿತ್ತು, ಆದರೂ ಮತ್ತೆ ಪಡೆದಿದೆ, ಈ ಹಿನ್ನೆಲೆಯಲ್ಲಿ ಮತ್ತಷ್ಟು ವಿಚಾರವನ್ನು ಚಿನ್ನಯ್ಯನಿಂದ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.