ಇತ್ತೀಚೆಗೆ ಸಾಕಷ್ಟು ಅನ್ಲೈನ್ ವಂಚನೆ ಪ್ರಕರಣಗಳು ವರದಿ ಆಗುತ್ತಿದೆ, ಉದಾಹರಣೆಗೆ ಯ್ಯೂಟ್ಯೂಬ್ನಲ್ಲಿ ಕೇಂದ್ರ ಸಚಿವರ ಫೋಟೊವನ್ನು ಬಳಸಿ ಈ ಜಾಲಗಳು ಸುಲಭವಾಗಿ ಬಳಕೆದಾರರನ್ನು ಯಾಮಾರಿಸುತ್ತಿದೆ. ಈ ಎಲ್ಲಾ ರೀತಿಯ ವಂಚನೆ ಬಗ್ಗೆ ಹೈಕೋರ್ಟ್ ಹೇಳಿಕೆ ನೀಡಿದ್ದು ಸಿಸಿಸಿ(ಸೈಬರ್ ಕಮಾಂಡ್ ಸೆಂಟರ್)ಗಳ ಬಗ್ಗೆ ತನ್ನ ನಿಲುವನ್ನು ತಿಳಿಸಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಪ್ರಕರಣಗಳು ತನಿಖೆಗೆ ‘ಸೈಬರ್ ಕಮಾಂಡ್ ಸೆಂಟರ್ʼ ಹೆಸರಿನ ಸ್ವತಂತ್ರ ತನಿಖಾ ಘಟಕವನ್ನು ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಕರ್ನಾಟಕ ಹೈಕೋರ್ಟ್, ಈ ಘಟಕವು ಸಮರ್ಪಕ ಮತ್ತು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶಿಸಿದೆ.
ನ್ಯೂಸ್ಪೇಸ್ ರಿಸರ್ಚ್ ಅಂಡ್ ಟೆಕ್ನಾಲಜೀಸ್ ಪ್ರವೈಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ಸಂಬಂಧ ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಕುರಿತು ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆ ಮಾಡಲು ಹೈಕೋರ್ಟ್ 2025ರ ಏಪ್ರಿಲ್ನಲ್ಲಿ ಆದೇಶಿಸಿತ್ತು. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ದೇಶದೆಲ್ಲೆಡೆ ನಡೆಯುತ್ತಿವೆ. ಸೈಬರ್ ಅಪರಾಧಗಳ ತನಿಖಗೆ ‘ಸೈಬರ್ ಕಮಾಂಡ್ ಸೆಂಟರ್’ ಹೆಸರಿನ ಸ್ವತಂತ್ರ ತನಿಖಾ ಘಟಕ ಸ್ಥಾಪನೆ ಮಾಡಲು ಹೈಕೊರ್ಟ್ ನಿರ್ದೇಶಿಸಿತ್ತು.ಶಾಸಕ ವೀರೇಂದ್ರ ಪಪ್ಪಿ ಜೊತೆಗಿನ ಉದ್ಯಮದಲ್ಲಿ ಅನಿಲ್ ಗೌಡ ಕೂಡ ಪಾಲುದಾರರು: ಇ ಡಿ ವಾದ
ಇದರಿಂದ ಮಾದಕ ವಸ್ತು ಮತ್ತು ಸೈಬರ್ ಪ್ರಕರಣಗಳ ತನಿಖೆಯನ್ನು ಸಿಐಡಿ ವ್ಯಾಪ್ತಿಯನ್ನು ಸಿಸಿಸಿಗೆ ವ್ಯಾಪ್ತಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಆದೇಶವನ್ನು ಸ್ವಾಗತಿಸಿರುವ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸಿಸಿಸಿ ಸ್ಥಾಪನೆ ಮಾಡಿದರೆ ಸಾಲದು. ಈ ಕೇಂದ್ರವು ಸಮರ್ಪಕ ಮತ್ತು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು. ಆದರೆ, ಅದು ನಿಷ್ಕ್ರಿಯವಾಗಿ ಉಳಿದರೆ, ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಯುವ ಕೆಲಸವು ಕೇವಲ ಕಾಗದದ ಮೇಲೆ ಉಳಿಯುತ್ತದೆ. ಮೇಲಾಗಿ ಸಿಸಿಸಿಯು ಅಧಿಕಾರಶಾಹಿಯ ಕಟ್ಟಡವಾಗಿರಬಾರದು. ಬದಲಾಗಿ ಒಂದು ಮಾದರಿ ಬದಲಾವಣೆಯಾಗಿರಬೇಕು. ಸೈಬರ್ ಅಪರಾಧದ ವಿರುದ್ಧದ ಹೋರಾಟದಲ್ಲಿ ದಾರಿ ದೀಪವಾಗಬೇಕು. ಸಿಸಿಸಿಗೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಿದರೆ, ಹೊಸ ಯುಗದ ಅಪರಾಧಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಆದ್ದರಿಂದ, ಸಿಸಿಸಿಯನ್ನು ಬಲಪಡಿಸಬೇಕು ಎಂದು ಹೇಳಿದೆ.TIMEX Classics Analog Watch for Men with Round Dial & Water Resistant Man's Wrist Watches
ಅಲ್ಲದೆ, ಸೈಬರ್ ಅಪರಾಧಗಳ ತನಿಖೆಯಲ್ಲಿನ ಪ್ರಗತಿ ಅಥವಾ ಎಲ್ಲಾ ಮಾಹಿತಿ ಮತ್ತು ತಂತ್ರಜ್ಞಾನ ಪ್ರಕರಣಗಳನ್ನು ಒಂದೇ ಸೂರಿನಡಿ ತರಬೇಕು. ಕೇಂದ್ರದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಇರಬೇಕು. ಸಿಸಿಸಿ ಅಡಿಯಲ್ಲಿ ತರಲಾದ ಅಧಿಕಾರಿಗಳನ್ನು ಅಸಾಧಾರಣ ಸಂದರ್ಭಗಳನ್ನು ಹೊರತುಪಡಿಸಿ, ವರ್ಗಾವಣೆ ಮಾಡಬಾರದು. ಸಿಸಿಸಿ ಮುಖ್ಯಸ್ಥರ ಪೂರ್ವಾಪರ ಸಮಾಲೋಚನೆಯಿಲ್ಲದೆ ಮುಖ್ಯಸ್ಥ ಮತ್ತು ಅವರ ತಂಡದ ಸದಸ್ಯರನ್ನು ರಾತ್ರೋರಾತ್ರಿ ಸ್ಥಾನದಿಂದ ಕೆಳಗಿಳಿಸಬಾರದು. ಅವರ ವರ್ಗಾವಣೆ ಮಾಡುವ ಮೂಲಕ ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ಅಡಚಣೆ ಉಂಟು ಮಾಡಬಾರದು ಎಂದು ಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.