ಧರ್ಮಸ್ಥಳದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಇದೀಗ ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ. 'ನೆಲದ ಮೇಲೆ ಮೃತದೇಹಗಳ ಅವಶೇಷಗಳು ಪತ್ತೆಯಾಗಿವೆ' ಎಂದು ಹೇಳಲಾದ ಜಾಗದಲ್ಲಿ ಈ ಶೋಧ ನಡೆಸಲಾಗುವುದು.ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ 2025: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು… ಪ್ರಮುಖ ಸೆಕ್ಷನ್ಗಳಿಗೆ ತಾತ್ಕಾಲಿಕ ತಡೆ!
ಪೊಲೀಸರಿಗೆ ಸಾಕ್ಷಿದಾರರು ಹಸ್ತಾಂತರಿಸಿದ್ದ ತಲೆಬುರುಡೆಯನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಕಾಡಿನಿಂದ ಹೊರತೆಗೆಯಲಾಗಿತ್ತು. ಈ ತಲೆಬುರುಡೆ ಪತ್ತೆಯಾದ ಸ್ಥಳವನ್ನು ತೋರಿಸಿದ ಧರ್ಮಸ್ಥಳ ಗ್ರಾಮದ ಪಾಂಗಾಳದ ವಿಠಲ ಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಇತ್ತೀಚೆಗೆ ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದರು.
ಆ ಜಾಗವು ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ವ್ಯಾಪ್ತಿಗೆ ಸೇರಿದೆ. ಮಹಜರು ಪ್ರಕ್ರಿಯೆ ಮುಗಿದ ನಂತರ, ವಿಠಲ ಗೌಡ ಅವರು ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.ಇದನ್ನೂ ಓದಿ: ಭಾರತ-ರಷ್ಯಾ ಸಂಬಂಧ ಬಲಶಾಲಿ, ಅಮೆರಿಕ ಸುಂಕ ಒತ್ತಡ ವಿಫಲ...ರಷ್ಯಾದ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!
ಈ ವಿಡಿಯೋದಲ್ಲಿ, "ತಲೆಬುರುಡೆ ಸಿಕ್ಕ ಸ್ಥಳದ ಮಹಜರಿಗೆ ತೆರಳಿದಾಗ, ಕಾಡಿನ ಒಂದು ಭಾಗದಲ್ಲಿ ಮೂರು ಮೃತದೇಹಗಳ ಅವಶೇಷಗಳು ಮತ್ತು ಇನ್ನೊಂದು ಕಡೆ ಎಂಟು ಮೃತದೇಹಗಳಿಗೆ ಸಂಬಂಧಿಸಿದ ಅವಶೇಷಗಳು ಕಂಡುಬಂದವು. ಮಹಜರು ಸಂದರ್ಭದಲ್ಲಿ ಎಸ್ಐಟಿ ಅಧಿಕಾರಿಗಳು ಕೂಡ ಇವುಗಳನ್ನು ಗಮನಿಸಿದ್ದಾರೆ" ಎಂದು ವಿಠಲ ಗೌಡ ತಿಳಿಸಿದ್ದರು.
ಈ ಕುರಿತು ಎಸ್ಐಟಿ ಅಧಿಕಾರಿಗಳು ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಕೆಲ ಅಧಿಕಾರಿಗಳನ್ನು ಸೋಮವಾರ ತಮ್ಮ ಕಚೇರಿಗೆ ಕರೆಸಿ ಸಮಾಲೋಚನೆ ನಡೆಸಿದ್ದಾರೆ.ಇದನ್ನೂ ಓದಿ: ಬಾನು ಮುಷ್ತಾಕ್ಗೆ ದಸರಾ ಉದ್ಘಾಟನೆ ಆಹ್ವಾನ ವಿಚಾರ: ಪ್ರತಾಪ್ ಸಿಂಹ ಸೇರಿ ಮೂವರ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್
ಎಸ್ಐಟಿ ಮೂಲಗಳು 'ಪ್ರಜಾವಾಣಿ'ಗೆ ನೀಡಿದ ಮಾಹಿತಿ ಪ್ರಕಾರ, ಸಾಕ್ಷಿದಾರರು ಒಪ್ಪಿಸಿರುವ ತಲೆಬುರುಡೆಯನ್ನು ಹೊರತೆಗೆದ ಕಾಡಿನ ಪ್ರದೇಶದಲ್ಲಿ ಮತ್ತಷ್ಟು ತೀವ್ರವಾದ ಶೋಧ ನಡೆಸಬೇಕಾಗಿದೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿವೆ.SHRIMATI JI Orange Cotton Silk Saree with Bold Black Woven Zari Border –Traditional Saree with Blouse for Festive, Office & Everyday Wear