Skip to main content
ವಿಡಿಯೋ
general

ಮುಡಾ ಹಗರಣ ಪ್ರಕರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಅನುಮತಿ - ವಿಚಾರಣೆ ಸೆ. 29 ಕ್ಕೆ ಮುಂದೂಡಿಕೆ

By Shravanthi R
ಮುಡಾ ಹಗರಣ ಪ್ರಕರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಅನುಮತಿ - ವಿಚಾರಣೆ ಸೆ. 29 ಕ್ಕೆ ಮುಂದೂಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿತ ಮುಡಾ ಹಗರಣ ಪ್ರಕರಣದಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ದಿನೇಶ್ ಕುಮಾರ್ ವಿರುದ್ಧ ಈಗಾಗಲೇ ಜಾರಿ ನಿರ್ದೇಶನಾಲಯವು ಆಸ್ತಿ ಮುಟ್ಟುಗೋಲು ಮಾಡಿಕೊಂಡಿದ್ದು, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಹಗರಣ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅಕ್ರಮ ನಿವೇಶನ ಹಂಚಿಕೆ ಆರೋಪವಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ವಿರುದ್ದ ತನಿಖೆಗೆ ಇಂದು ಸಮ್ಮತಿ ಸೂಚಿಸಿದೆ. ಇದನ್ನೂ ಓದಿ: ಇಸ್ರೇಲ್‌ನ ಗಾಜಾ ದಾಳಿ ತೀವ್ರ: ಅಮೆರಿಕಾದಿಂದ ಸಂಪೂರ್ಣ ಬೆಂಬಲ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಕೋರಿ ಮುಡಾದ ಮಾಜಿ ಅಧ್ಯಕ್ಷ ಹೆಚ್‌. ವಿ ರಾಜೇಶ್‌ ಕುಮಾರ್‌ ಮತ್ತು ದಿನೇಶ್‌ ಕುಮಾರ್‌ ವಿರುದ್ದ ಲೋಕಾಯುಕ್ತ ಪೋಲಿಸರು ಪ್ರಾಸಿಕ್ಯೂಷನ್‌ ಅನುಮತಿ ಕೋರಲಾಗಿದ್ದು, ಈ ಬಗ್ಗೆ ದಿನೇಶ್‌ ಕುಮಾರ್‌ ಅವರ ವಿರುದ್ದ ಮಾತ್ರ ತನಿಖೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಈಗಾಗಲೇ ಜಾರಿ ನಿರ್ದೇಶನಾಲಯವು, ದಿನೇಶ್‌ ಅವರ ಆಸ್ತಿ ಜಪ್ತಿ ಮಾಡಿದೆ ಎನ್ನಲಾಗಿದೆ. The Monk Who Sold His Ferrari Paperback – 25 September 2003

ಈ ಪ್ರಕರಣ ತನಿಖೆ ತಡವಾಗಿದ್ದಕ್ಕೆ ಅಸಮಧಾನ ತೋರಿದ ಕೋರ್ಟ್‌, ಕಳೆದ ಆರು ತಿಂಗಳಿನಲ್ಲಿ ಏನೂ ಪ್ರಗತಿ ಕಂಡಿಲ್ಲ, ಇದೀಗ ಪ್ರಾಸಿಕ್ಯೂಷನ್‌ ಅನುಮತಿ ತಡವಾಗುತ್ತಿದೆ ಎಂದು ಚಾಟಿ ಬೀಸಿತು. ಈ ಮದ್ಯೆ ಸ್ನೇಹಮಯಿ ಕೃಷ್ಣ ಅವರು ತಾವು ಮಾನಸಿಕವಾಗಿ ಕುಗ್ಗಿದ್ದು, ಪೋಲಿಸರ ನಡೆಯಿಂದ ಸಮಾಜದಲ್ಲಿ ಅವಮಾನಕ್ಕೊಳಗಾಗಿದ್ದೇನೆ ಎಂದು ತಿಳಿಸಿ, ಈ ಬಗ್ಗೆ ತನಿಖೆಗೆ ಆಗ್ರಹಿಸಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ವಾದ ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯವು ವಿಚಾರಣೆಯನ್ನು ಸೆ. 29 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಶ್ರೀಲಂಕಾ vs ಹಾಂಗ್ ಕಾಂಗ್, ಏಷ್ಯಾ ಕಪ್ 2025: ಪಂದ್ಯದ ಸಾರಾಂಶ ಹೀಗಿದೆ: ಹಾಂಗ್ ಕಾಂಗ್ ಹೊರಕ್ಕೆ?