Skip to main content
ವಿಡಿಯೋ
1/2
politics

ಜಾತಿ ಸಮೀಕ್ಷೆ - ಕ್ರಿಶ್ಚಿಯನ್‌ ಧರ್ಮಕ್ಕೆ ಜಾತಿ ಸೇರ್ಪಡೆ ವಿರೋಧಿಸಿ ಬಿಜೆಪಿ ನಾಯಕರಿಂದ ರಾಜ್ಯಪಾಲರಿಗೆ ದೂರು.!

By Shravanthi R
ಜಾತಿ ಸಮೀಕ್ಷೆ -  ಕ್ರಿಶ್ಚಿಯನ್‌ ಧರ್ಮಕ್ಕೆ ಜಾತಿ ಸೇರ್ಪಡೆ ವಿರೋಧಿಸಿ ಬಿಜೆಪಿ ನಾಯಕರಿಂದ ರಾಜ್ಯಪಾಲರಿಗೆ ದೂರು.!

ಜಾತಿ ಗಣತಿಯ ಕುರಿತು ಬಿಜೆಪಿ ನಾಯಕರು ರಾಜ್ಯಪಾಲರಿಗೆ ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇನ್ನೊಂದೆಡೆ, ಹಿಂದುಳಿದ ವರ್ಗಗಳ ಅಧ್ಯಕ್ಷರು ಕ್ರಿಶ್ಚಿಯನ್ ಹೆಸರಿನಿಂದ ಯಾರಿಗೂ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ ಜಾತಿ ಗಣತಿಯಲ್ಲಿ ಹಿಂದೂ ಸಮುದಾಯಗಳ ಕೆಲವು ಉಪಜಾತಿಗಳನ್ನು ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದ ಜಾತಿಗಳೊಂದಿಗೆ ಸೇರಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಜಾತಿ ಸಮೀಕ್ಷೆಗೂ ಮುನ್ನವೇ ಈ ಕಾಲಂ ಅನ್ನು ಕೈಬಿಡಬೇಕು ಎಂದು ನಿಯೋಗವು ಆಗ್ರಹಿಸಿದೆ ಎನ್ನಲಾಗಿದೆ. Do Not Disturb: An Addictive Psychological Thriller from the Author of The Housemaid Books Paperback – 1 July 2025

ಇದೇ ವಿಷಯವಾಗಿ ಇಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ನಾಯಕರ ಸಭೆಯ ನಂತರ, ಸಂಸದ ಯದುವೀರ್ ಮತ್ತು ಶಾಸಕ ವಿ. ಸುನೀಲ್ ಕುಮಾರ್ ನೇತೃತ್ವದಲ್ಲಿ ಈ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿದೆ ಎನ್ನಲಾಗಿದೆ. ಸಭೆಯ ಬಳಿಕ ಮಾತನಾಡಿ, ರಾಜ್ಯ ಸರ್ಕಾರವು ಒಬಿಸಿ ಹೆಸರಿನಲ್ಲಿ ಹೊಸ ಜಾತಿಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇದು ಮುಖ್ಯಮಂತ್ರಿಗಳು ತಮ್ಮ ಸಾಮಾಜಿಕ ನಿಲುವುಗಳನ್ನು ಮರೆತಿದ್ದಾರೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ನಿಯೋಗವು ರಾಜ್ಯಪಾಲರಿಗೆ ಮನವಿ ಮಾಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಪಕ್ಕದ ಮನೆಯವರ ಸಹಾಯ ಪಡೆದು ಮನೆ ದೋಚಿದ ಖತರ್ನಾಕ್‌ ಕಳ್ಳ ಅಂದರ್‌..!!

ಕ್ರಿಶ್ಚಿಯನ್ ಹೆಸರಿನಿಂದ ಯಾರಿಗೂ ತೊಂದರೆಯಾಗುವುದಿಲ್ಲ -

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್‌ ನಾಯ್ಕ್‌ ಅವರು, ರಾಜ್ಯದಲ್ಲಿ ಜಾತಿ ಗಣತಿ ವಿವಾದದ ಕುರಿತು ಸ್ಪಷ್ಟನೆ ನೀಡಿದ್ದು, ಕ್ರಿಶ್ಚಿಯನ್‌ ಹೆಸರಿನಿಂದ ತೊಂದರೆಯಾಗುವುದಿಲ್ಲ, ಜಾತಿ ಗಣತಿ - ಆಯೋಗದ ಮೇಲೆ ಯಾವುದೇ ಒತ್ತಡ ಇಲ್ಲ, ಇತರೆ ಆಕ್ಷೇಪಗಳು ಕಾನೂನುಬದ್ಧವಾಗಿಲ್ಲ ಎನ್ನಲಾಗಿದೆ. ಜಾತಿ ಸಮೀಕ್ಷೆಗೆ ಮತಾಂತರಗೊಂಡವರು ಕ್ರಿಶ್ಚಿಯನ್‌ ಅಂತಲೇ ಪರಿಗಣನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ: ರೈತರ ಭೂಮಿಗೆ ಮಹತ್ವದ ಮೊತ್ತ ನಿಗದಿ ಪಡಿಸಿ, ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ