ರಾಜ್ಯ ಸರ್ಕಾರದ ಜಾತಿ ಸಮೀಕ್ಷೆ ವಿರೋಧಿಸಿ ಬಿಜೆಪಿ ಲಿಂಗಾಯತ ಸಮುದಾಯದ ನಾಯಕರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಸಮೀಕ್ಷೆಯ ನೆಪದಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯುವ ದುಸ್ಸಾಹಸಕ್ಕೆ ಸರ್ಕಾರ ಕೈಹಾಕಿದೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ‘ಹಿಂದೂ’ ಎಂದು, ಜಾತಿ ಕಾಲಂನಲ್ಲಿ ‘ವೀರಶೈವ ಲಿಂಗಾಯತ’ ಎಂದು ನಮೂದಿಸುವ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾ, ಸಮುದಾಯದ ಹಿರಿಯರು ಹಾಗೂ ಮಠಾಧೀಶರೊಂದಿಗೆ ಚರ್ಚಿಸಿ ಮನವೊಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಈ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಸಂಸದರಾದ ಪ್ರಭಾಕರ ಕೋರೆ, ಜಿ.ಎಂ. ಸಿದ್ದೇಶ್ವರ್, ವಿಜಯ ಸಂಕೇಶ್ವರ ಪಾಲ್ಗೊಂಡಿದ್ದರು.ಇದನ್ನು ಓದಿ: ಬೆಂಗಳೂರಿನಲ್ಲಿ ಮನೆ ಲೀಸ್ಗೆ ಪಡೆಯೋ ಮುನ್ನ ಎಚ್ಚರ: ರಾಜನಾಥ್ ಸಿಂಗ್ ಜೊತೆ ಪೋಟೋ: 60 ಕೋಟಿಗೂ ಅಧಿಕ ವಂಚನೆ; ಇಲ್ಲಿದೆ ಮಾಹಿತಿ
ಇದರ ಜೊತೆಗೆ, ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಬಿ.ಸಿ. ಪಾಟೀಲ್ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಈ ತಿಂಗಳ 19ರಂದು ಹುಬ್ಬಳ್ಳಿಯಲ್ಲಿ ವೀರಶೈವ-ಲಿಂಗಾಯತ ಸಮುದಾಯದವರಲ್ಲಿ ಸಮೀಕ್ಷೆ ಕುರಿತು ಜಾಗೃತಿ ಮೂಡಿಸಲು ಏಕತಾ ಸಮಾವೇಶ ಆಯೋಜಿಸಲಾಗಿದೆ.Handcuffs Backpacks Vegan Leather Casual Backpack Multipurpose Travelling Bags Daypacks For Men And Women
ಈ ಸಮಾವೇಶದಲ್ಲಿ ಸರಿಯಾದ ಮಾಹಿತಿ ರವಾನೆಯಾಗಬೇಕು ಎಂಬ ನಿಲುವಿಗೆ ಸಭೆಯಲ್ಲಿ ಬರಲಾಯಿತು. ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ವೀರಶೈವ ಲಿಂಗಾಯತ ಸಮುದಾಯದವರು ಎಲ್ಲ ಸಣ್ಣ ಪುಟ್ಟ ವ್ಯತ್ಯಾಸಗಳನ್ನು ಮರೆತು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸಲು ಮುಂದಾಗಿರುವ ಜಾತಿ ಸಮೀಕ್ಷೆಯಲ್ಲಿ ಸ್ಪಷ್ಟ ಮಾಹಿತಿ ನೀಡದಿದ್ದರೆ ಮುಂದಿನ ಪೀಳಿಗೆಗೆ ತೊಂದರೆ ಉಂಟಾಗಲಿದೆ. ಆದ್ದರಿಂದ, ಈಗಲೇ ಎಲ್ಲರೂ ಒಗ್ಗಟ್ಟಿನಿಂದ ಸೂಕ್ತ ನಿರ್ಣಯ ಕೈಗೊಂಡು ಅದನ್ನು ಸಮುದಾಯದ ಜನರಿಗೆ ತಲುಪಿಸಬೇಕು ಎಂದು ಯಡಿಯೂರಪ್ಪ ಸಲಹೆ ನೀಡಿದರು.
ಸಭೆಯ ನಂತರ ಪ್ರಭಾಕರ ಕೋರೆ, ಎಂ.ಪಿ. ರೇಣುಕಾಚಾರ್ಯ ಮತ್ತು ವೀರಣ್ಣ ಚರಂತಿಮಠ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಯೂ ಆಗಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.