ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ನವರಾತ್ರಿ ಉತ್ಸವವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿದಿನ ಸಂಜೆ 6 ಗಂಟೆಯಿಂದ ಪ್ರವಚನ ಮಂಟಪದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ಸೆಪ್ಟೆಂಬರ್ 22 ರಂದು ಮಾಸ್ಟರ್ ಅಶ್ಮಿತ್ ಮಂಗಳೂರು ಅವರಿಂದ ಭಕ್ತಿ ಸಂಗೀತ
ಸೆಪ್ಟೆಂಬರ್ 23 ರಂದು ವಿದ್ಯಾ ಎಸ್. ರಾವ್ ಬಳಗ ಉಡುಪಿ ಅವರಿಂದ ಶಾಸ್ತ್ರೀಯ ಸಂಗೀತ ಸೆಪ್ಟೆಂಬರ್ 24 ರಂದು ಅನಘಾ ಅವಧೂತ್ ಬೆಳಗಾವಿ ಅವರಿಂದ ಸಿತಾರ್ ವಾದನ ಕಾರ್ಯಕ್ರಮಗಳು ಇವೆ.
ಸೆಪ್ಟೆಂಬರ್ 25 ರಂದು ಶ್ರೀವಿದ್ಯಾ ಉಜಿರೆ ಅವರಿಂದ ಶಾಸ್ತ್ರೀಯ ಸಂಗೀತ
ಸೆಪ್ಟೆಂಬರ್ 26 ರಂದು ಸಿಂಚನಾ ಎಂ. ಗೌಡ ಬಳಗ ಪುತ್ತೂರು ಅವರಿಂದ ಭಕ್ತಿ ರಸಮಂಜರಿ ಸೆಪ್ಟೆಂಬರ್ 27 ರಂದು ಚಂದ್ರಿಕಾ ರಾಜಾರಾಮ್ ಬೆಂಗಳೂರು ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.
ಸೆಪ್ಟೆಂಬರ್ 28 ರಂದು ಅನುರಾಧ ಭಟ್ ಅಡ್ವಸ್ಥಳ, ಕೇಪು, ವಿಟ್ಲ ಅವರಿಂದ ಶಾಸ್ತ್ರೀಯ ಸಂಗೀತ
ಸೆಪ್ಟೆಂಬರ್ 29 ರಂದು ಶ್ರೀಲಕ್ಷ್ಮಿ ಬೆಳ್ಳಣ್ಣು, ಬೆಂಗಳೂರು ಅವರಿಂದ ಶಾಸ್ತ್ರೀಯ ಸಂಗೀತ ಸೆಪ್ಟೆಂಬರ್ 30 ರಂದು ನವ್ಯ ಎಂ. ಆರ್. ಹಾಗೂ ಬಳಗ ಪುತ್ತೂರು ಅವರಿಂದ ಸುಗಮ ಸಂಗೀತ ಕಾರ್ಯಕ್ರಮಗಳು ಆಯೋಜಿತವಾಗಿವೆ.
ಅಕ್ಟೋಬರ್ 1 ರಂದು ಸಂಜೆ 6:30 ರಿಂದ 8:30 ರವರೆಗೆ ಆರಾಧ್ಯ ರಾವ್ ಬೆಂಗಳೂರು ಅವರಿಂದ ಭಕ್ತಿ ರಸಮಂಜರಿ ಹಾಗೂ ರಾತ್ರಿ 9 ರಿಂದ 11:30 ರವರೆಗೆ ಕ್ಷಿತಿ ರೈ ಧರ್ಮಸ್ಥಳ ಅವರಿಂದ ಸುಗಮ ಸಂಗೀತ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಜಿರೆಯ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥ ಕ್ಷೇತ್ರಕ್ಕೆ ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸೆಪ್ಟೆಂಬರ್ 21 ರಂದು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕೀರ್ತಿಶೇಷ ಕಿನ್ನಮ್ಮ ಯಾನೆ ಗುಣವತಿ ಅಮ್ಮ ಸ್ಮಾರಕ ಟ್ರಸ್ಟ್ ವತಿಯಿಂದ 700 ವಿದ್ಯಾರ್ಥಿಗಳಿಗೆ ಒಟ್ಟು 25 ಲಕ್ಷ ರೂಪಾಯಿ ಮೌಲ್ಯದ ವಿದ್ಯಾರ್ಥಿ ಪ್ರೋತ್ಸಾಹಧನವನ್ನು ವಿತರಿಸಲಾಗುವುದು. Pikkme OnePlus Nord (2020) Back Cover | D5 Tough Armor Bumper | 360 Protection Case | Ring Holder Stand Case for OnePlus Nord (2020) (Black)
ಬಸದಿಯ ಅನುವಂಶಿಕ ಆಡಳಿತ ಮೊಕೇಸರ ಕೆ. ಜಯವರ್ಮರಾಜ್ ಬಳ್ಳಾಳ್ ಈ ಮಾಹಿತಿ ನೀಡಿದ್ದು, ಅಂದು ಬೆಳಗ್ಗೆ 7 ಗಂಟೆಯಿಂದ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಕಲಶಾಭಿಷೇಕ ನೆರವೇರಲಿದೆ. ಬಸದಿ ಆಡಳಿತ ಮೊಕ್ತಸರರಾಗಿದ್ದ ಕೆಲ್ಲಗುತ್ತು ಸಬ್ರಬೈಲು ಕಿನ್ನಮ್ಮ ಯಾನೆ ಗುಣವತಿ ಅಮ್ಮ ಅವರ ವಾರ್ಷಿಕ ಸ್ಮರಣಾರ್ಥ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮೂರು ಬಸದಿಗಳಲ್ಲಿ ನವಕಲಶಾಭಿಷೇಕ, ಮಹಾಪೂಜೆ ಮತ್ತು ಪದ್ಮಾವತಿ ಅಮ್ಮನವರಿಗೆ ಅಲಂಕಾರಪೂಜೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಯಿಂದ ಸ್ವಾಮೀಜಿ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಮಾಡಲಿದ್ದು, ಬಸದಿಯ ಅನುವಂಶಿಕ ಆಡಳಿತ ಮೊಕ್ತಸರ ಕೆ. ಜಯವರ್ಮರಾಜ್ ಬಳ್ಳಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದನ್ನೂ ಓದಿ: “ನಮೋ ಯುವ ರನ್”: 75 ನಗರಗಳ ರಸ್ತೆಗಳಲ್ಲಿ ಮ್ಯಾರಥಾನ್ ಓಟ: ಸಂಸದ ತೇಜಸ್ವಿ ಸೂರ್ಯ, ಮಹಾರಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಭಾಗಿ