Skip to main content
ವಿಡಿಯೋ
1/2
general

ಆಧುನಿಕ ಜೀವನಶೈಲಿಯಿಂದ ಉಂಟಾಗುವ ರೋಗಗಳಿಗೆ ತುತ್ತಾಗದಂತೆ ಎಚ್ಚರವಹಿಸಿ - ಸಚಿವ ಕೃಷ್ಣಬೈರೇಗೌಡ

By Shravanthi R
ಆಧುನಿಕ ಜೀವನಶೈಲಿಯಿಂದ ಉಂಟಾಗುವ ರೋಗಗಳಿಗೆ ತುತ್ತಾಗದಂತೆ ಎಚ್ಚರವಹಿಸಿ - ಸಚಿವ ಕೃಷ್ಣಬೈರೇಗೌಡ

ಇಂದು, ಸಚಿವ ಕೃಷ್ಣಬೈರೇಗೌಡ ಅವರು, ಹಾಸನ ಜಿಲ್ಲೆಯಲ್ಲಿ ಆರೋಗ್ಯ ಅಧಿಕಾರಿಗಳ ಜೊತೆಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ಆಧುನಿಕ ಜೀವನ ಶೈಲಿಯಿಂದ ಉಂಟಾಗುವ ಆರೋಗ್ಯ ತೊಂದರೆಗಳ ಬಗ್ಗೆ ವಿಶೇಷ ಗಮನಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಕಂದಾಯ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಅವರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಅವರು, ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಹಿಮ್ಸ್‌ (HIMS) ನಿರ್ದೇಶಕರೊಂದಿಗೆ  ಸಂವಾದಿಸಿ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ ಜೀವನ ಶೈಲಿಯಿಂದ ಉಂಟಾಗುವ ಆರೋಗ್ಯ ತೊಂದರೆಗಳ ಕುರಿತಾಗಿ ವಿಶೇಷ ಗಮನಹರಿಸುವಂತೆ ಎಲ್ಲಾ ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಮಾತನಾಡಿದ ಸಚಿವರು, ಹೃದಯಘಾತದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು ಹಾಗೂ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಯೋಜನೆಗಳು ಸೇರಿದಂತೆ ಹೆಚ್ಚುತ್ತಿರುವ ಕಾಯಿಲೆಗಳಾದ ಕ್ಯಾನ್ಸರ್, ಯಕೃತ್ ಮತ್ತು ಹೃದ್ರೋಗಗಳ ಚಿಕಿತ್ಸೆಗೆ ಪೂರಕವಾದ ಗಮನಹರಿಸುವಂತೆ ಸೂಚಿಸಿದರು. ಅಂಕಿ ಅಂಶಗಳ ಪ್ರಕಾರ, ಒಟ್ಟು ವರ್ಷದಲ್ಲಿ ರೋಗಿಗಳ ಮರಣ ಪ್ರಮಾಣ 6.6% ಇದ್ದು; ಈ ವರ್ಷ 5.6% ಗೆ ಇಳಿಕೆಯಾಗಿದೆ. ವಿಶೇಷವಾಗಿ ಹೃದಯಾಘಾತದಿಂದ ದಾಖಲಾದ 315 ಪ್ರಕರಣಗಳಲ್ಲಿ ಮರಣ ಪ್ರಮಾಣವು ಇಳಿಕೆಯಾಗಿದೆ ಎಂದು ಅಧಿಕಾರಿಗಳಿಂದ ತಿಳಿಯಪಡಿಸಲಾಗಿದೆ ಎನ್ನಲಾಗಿದೆ.  Samsung Galaxy Z Fold6 5G Smartphone with Galaxy AI (Navy, 12GB RAM, 256GB Storage), 50MP High-Resolution Camera, Snapdragon 8 Gen 3, Google Gemini

ಈವರೆಗಿನ ಸಾಂಪ್ರದಾಯಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಸೇರಿದಂತೆ ಮುಂತಾದ ರೋಗಗಳ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತಿತ್ತು. ಈಗ ಇದಲ್ಲದೇ, ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಆಧುನಿಕತೆ ಹವ್ಯಾಸಗಳು ಪರಿಣಮಿಸಿವೆ. ಹೀಗಾಗಿ ಆಧುನಿಕ ಸವಾಲುಗಳಿಗೆ ಹೊಂದಿಕೊಳ್ಳುವಂತೆ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಬೇಕೆಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದರೊಟ್ಟಿಗೆ, ಆರೋಗ್ಯ ಇಲಾಖೆಯ ಹೊಸ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಲು ನಿರ್ದೇಶನ ನೀಡಿದರು ಎನ್ನಲಾಗಿದೆ. ಇದನ್ನೂ ಓದಿ: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಟ್ರಸ್ಟ್‌ಗೆ ಯಾವುದೇ ಸಂಬಂಧವಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ..!!