Skip to main content
ವಿಡಿಯೋ
1/3
general

ನಾಪತ್ತೆ ಪ್ರಕರಣದ ತನಿಖೆಗೆ ಆಧಾರ್‌ ಕಾರ್ಡ್‌ ಬಳಕೆಗೆ ವಿವರ ಒದಗಿಸಲು UIDAI ಗೆ ಹೈಕೋರ್ಟ್‌ ನಿರ್ದೇಶನ

By Gireesh Vasishta
ನಾಪತ್ತೆ ಪ್ರಕರಣದ ತನಿಖೆಗೆ ಆಧಾರ್‌ ಕಾರ್ಡ್‌ ಬಳಕೆಗೆ ವಿವರ ಒದಗಿಸಲು UIDAI ಗೆ ಹೈಕೋರ್ಟ್‌ ನಿರ್ದೇಶನ

ತನಿಖೆಯ ವೇಳೆ ಪೊಲೀಸರಾಗಲಿ ಅಥವಾ ಬೇರಾವುದೇ ಸಂಸ್ಥೆಯಾಗಲಿ ದೃಢೀಕರಣ ಸೇರಿದಂತೆ ಆಧಾರ್‌ ಬಳಕೆ ಮಾಡಬೇಕಾಗಿ ಬಂದರೆ ಅಂತಹ ಸಂದರ್ಭಗಳಲ್ಲಿ ಆಧಾರ್‌ ಕಾಯಿದೆ 2016 ರ ಸೆಕ್ಷನ್‌ 33 ರ ಅನ್ವಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಬೇಕು ಎಂದಿರುವ ನ್ಯಾಯಾಲಯ.

ನಾಪತ್ತೆಯಾಗಿರುವ ವ್ಯಕ್ತಿಯ ಸಂಬಂಧಿತ ದೂರಿನ ತನಿಖೆಗಾಗಿ ಆತ ಕೊನೆಯ ಬಾರಿ ಆಧಾರ್ಕಾರ್ಡ್ಬಳಕೆ ಮಾಡಿದ್ದ ಸ್ಥಳದ ವಿವರಗಳನ್ನು ಒದಗಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರಕ್ಕೆ (ಯುಐಡಿಎಐ) ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠಈಚೆಗೆ ನಿರ್ದೇಶಿಸಿದೆ. ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಕೃಷ್ಣಮೂರ್ತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ಗೋವಿಂದರಾಜ್ ಅವರ ಏಕಸದಸ್ಯ ಆದೇಶ ಮಾಡಿದೆ.

 

ತನಿಖೆಯ ವೇಳೆ ಪೊಲೀಸರಾಗಲಿ ಅಥವಾ ಬೇರಾವುದೇ ಸಂಸ್ಥೆಯಾಗಲಿ ದೃಢೀಕರಣ ಸೇರಿದಂತೆ ಆಧಾರ್ಬಳಕೆ ಮಾಡಬೇಕಾಗಿ ಬಂದರೆ ಅಂತಹ ಸಂದರ್ಭಗಳಲ್ಲಿ ಆಧಾರ್ಕಾಯಿದೆ 2016 ಸೆಕ್ಷನ್‌ 33 ಅನ್ವಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಬೇಕು. ನ್ಯಾಯಾಲಯವು ಸಂಬಂಧ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬಳಿಕಆಧಾರ್ಕಾಯಿದೆಯ ಸೆಕ್ಷನ್‌ 33 ಅಡಿ ಯುಐಡಿಎಐಗೆ ಸೂಕ್ತ ಕಾಲಾವಕಾಶ ನೀಡಬೇಕು, ತದನಂತರ, ಆಧಾರ್ಕಾರ್ಡ್ಬಳಕೆಗೆ ಸಂಬಂಧಿಸಿದ ಮಾಹಿತಿ, ಅದನ್ನು ಎಲ್ಲಿ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಒದಗಿಸುವ ಕುರಿತು ನ್ಯಾಯಯುತವೂ ಮತ್ತು ಅಗತ್ಯವೂ ಆದ ಮಾಹಿತಿ ಒದಗಿಸಲು ಯುಐಡಿಎಐಗೆ ಆದೇಶ ನೀಡಬಹುದು ಎಂದು ಪೀಠವು ತನ್ನ ಆದೇಶದಲ್ಲಿ ದಾಖಲಿಸಿದೆ.ಇದನ್ನು ಓದಿ: ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು: ಸಮಜಾಯಿಷಿ ನೀಡಿದ್ದಕ್ಕೆ ಉತ್ತರಾಖಂಡ ಚುನಾವಣಾ ಆಯೋಗಕ್ಕೆ ₹2 ಲಕ್ಷ ದಂಡ

ಆಧಾರ್ ಕಾಯಿದೆಯ ಸೆಕ್ಷನ್ 29 ಅಡಿ ಮಾಹಿತಿ ನೀಡಲು ನಿರ್ಬಂಧವಿದೆ. ಆದರೆ, ನಿರ್ಬಂಧದ ಮೂಲ ಬಯೋಮೆಟ್ರಿಕ್ ಮಾಹಿತಿಗಷ್ಟೇ. ಆದರೆ ಯಾರಾದರೂ ನಿರ್ದಿಷ್ಟವಾಗಿ ಅರ್ಜಿ ಸಲ್ಲಿಸಿದಾಗ ಆಧಾರ್ಸಂಖ್ಯೆ, ಬಯೋಮೆಟ್ರಿಕ್ ಮಾಹಿತಿ ಮತ್ತು ಡೆಮೋಗ್ರಾಫಿಕ್ ಮಾಹಿತಿಯನ್ನು ಒದಗಿಸಬೇಕಾಗುತ್ತದೆ. ಮತ್ತು ಕೆಲವೊಂದು ಸಂದರ್ಭಗಳಲ್ಲಿ ತನಿಖೆಯ ಉದ್ದೇಶಕ್ಕೆ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಯುಐಡಿಎಐಗೆ ನ್ಯಾಯಾಲಯಗಳು ಸೂಕ್ತ ನಿರ್ದೇಶನ ನೀಡಬಹುದಾಗಿದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ. Monte Carlo Mens Solid Lace Up Genuine Leather Casual Shoes (201803FW)

ಹೀಗಾಗಿ, ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ನಾಪತ್ತೆಯಾಗಿರುವ ಪುತ್ರನ ಆಧಾರ್ಬಳಕೆ ಬಗ್ಗೆ ದೂರು ನೀಡಿದ 15 ದಿನಗಳ ಹಿಂದಿನಿಂದ ಹಿಡಿದು ಈವರೆಗಿನ ಎಲ್ಲಾ ಮಾಹಿತಿಯನ್ನು 15 ದಿನಗಳಲ್ಲಿ ತನಿಖಾಧಿಕಾರಿಗೆ ಒದಗಿಸಬೇಕು. ತನಿಖೆಯ ಉದ್ದೇಶಕ್ಕೆ ಹೊರತುಪಡಿಸಿ ಇತರೆ ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ನ್ಯಾಯಾಲಯ ಆದೇಶ ಮಾಡಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರರ ಮಗ 2019 ರಲ್ಲಿ ನಾಪತ್ತೆಯಾಗಿದ್ದರು. ಸಂಬಂಧ ಅರ್ಜಿದಾರರು 2019 ಡಿಸೆಂಬರ್​ 19ರಂದು ಹುಬ್ಬಳ್ಳಿಯ ಗೋಕುಲ್ರಸ್ತೆ ಪೊಲೀಸ್ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಸಂಬಂಧ ಹಲವು ಪ್ರಯತ್ನ ನಡೆಸಿದರು, ನಾಪತ್ತೆಯಾದ ಮಗ ಪತ್ತೆಯಾಗಿರಲಿಲ್ಲ.

ಆದರೆ, 2023 ಜೂನ್‌ 20 ರಂದು ನಾಪತ್ತೆಯಾದ ಪುತ್ರನ ಆಧಾರ್ಬಳಕೆ ದೃಢೀಕರಣವಾಗಿರುವುದು ಸಂಬಂಧ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಅರ್ಜಿದಾರರು ಹುಬ್ಬಳ್ಳಿಯ ಪೊಲೀಸ್ಕಮಿಷನರ್ಮತ್ತು ಆಧಾರ್ ಪ್ರಾದೇಶಿಕ ಕಚೇರಿಗೆ ಮಾಹಿತಿ ನೀಡಿದ್ದರು. ಜೊತೆಗೆ, ತಮ್ಮ ಮಗನ ಆಧಾರ್ಬಳಕೆ ವಿವರಗಳನ್ನು ಒದಗಿಸುವಂತೆ ಅರ್ಜಿದಾರರು ಯುಐಡಿಎಐಗೆ 2024 ಮೇ 10 ರಂದು ಮನವಿ ಸಲ್ಲಿಸಿದ್ದರು. ಮನವಿಯನ್ನು ಪ್ರಾಧಿಕಾರ ಪರಿಗಣಿಸಿರಲಿಲ್ಲ. ಹೀಗಾಗಿ ತನಿಖೆಗೆ ವಿವರಗಳನ್ನು ಒದಗಿಸುವಂತೆ ಅರ್ಜಿದಾರರು ಹೈಕೋರ್ಟ್ಮೆಟ್ಟಿಲೇರಿದ್ದರು.