ಹಾಸನ: ಎರೆಡು ದಿನಗಳ ಹಿಂದೆ ಹಾಸನ ಜಿಲ್ಲೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಎರೆಡು ಸಿಲಿಂಡರ್ಗಳು ಸ್ಫೋಟಗೊಂಡು ದಂಪತಿಗಳಿಬ್ಬರು ಗಾಯಗೊಂಡಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಘಟನೆ ಹಾಸನ ಜಿಲ್ಲೆಯ ಹಳೇ ಆಲೂರು ಪಟ್ಟಣದಲ್ಲಿ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದರು.ಇದನ್ನೂ ಓದಿ: ಆರ್ಬಿಐ ರೆಪೋ ದರ 5.5% ಸ್ಥಿರ, ಹಣದುಬ್ಬರ 2.6%, ಜಿಡಿಪಿ 6.8%...ಆರ್ಥಿಕ ಸ್ಥಿರತೆಗೆ ಸೂಚನೆ!
32 ವರ್ಷದ ಸುದರ್ಶನ್, 27 ವರ್ಷದ ಕಾವ್ಯ ದಂಪತಿ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿ ಹಿಮ್ಸ್ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ರವಾನೆ ಮಾಡಲಾಗಿತ್ತು.ಇದನ್ನೂ ಓದಿ:ಅಮೆರಿಕಾ ಟ್ರಂಪ್ ಸರ್ಕಾರ ಶಟ್ಡೌನ್ - ಸರ್ಕಾರಿ ಸೇವೆಗಳು ಸ್ಥಗಿತ, ಕ್ರೈಸಿಸ್ನಿಂದ ಜನಜೀವನಕ್ಕೆ ಹೊಡೆತ.!
ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ದಂಪತಿಗೆ ಒಂದು 14 ತಿಂಗಳ ಮಗು ಇತ್ತು ಈಗ ಅದು ಅನಾಥವಾಗಿದೆ.ಈ ಮಧ್ಯೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ ರಾತ್ರಿ 8:30 ರ ಸಮಯದಲ್ಲಿ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಮನೆಯಲ್ಲಿದ್ದ ಎರಡು ಸಿಲಿಂಡರ್ ಸ್ಫೋಟಗೊಂಡಿತ್ತು.ಇದನ್ನೂ ಓದಿ: ಭಾರತದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ : ಹೂಡಿಕೆ ಇಳಿಮುಖವಾಗುವ ಸಾಧ್ಯತೆ! ಇಂದು ಎಷ್ಟು ಏರಿಕೆ?
ಜೊತೆಗೆ ಮನೆಯಲ್ಲಿ ಗೀಸರ್ ಸಹ ಇತ್ತು ಇದರಿಂದ ಸ್ಫೋಟ ಸಂಭವಿಸಿರಬಹುದಾ ಎಂಬುದನ್ನು ಶಂಕಿಸಲಾಗಿತ್ತು. ಆದರೆ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದ ಮದ್ದು ಸ್ಫೋಟಗೊಂಡು ಈ ದುರಂತ ನಡೆದಿರುವುದು ಗೊತ್ತಾಗಿದೆ.
ಮನೆಯಲ್ಲಿ ಸಿಡಿಮದ್ದನ್ನು ತಯಾರಿಸುತ್ತಿದ್ದರು. ಅದಕ್ಕಾಗಿ ಮದ್ದನ್ನು ಸಂಗ್ರಹಿಸಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ.SGF11 Women's Kanjivaram Pure Soft Silk Saree With Unstitched Blouse Piece