Skip to main content
ವಿಡಿಯೋ
1/2
politics

ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ..!

By Sushmitha R
ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ..!

ಮೈಸೂರು ಬಿಹಾರ ವಿಧಾನಸಭೆ ಚುನಾವಣೆಯ ನಂತರ ಕರ್ನಾಟಕದ ರಾಜಕಾರಣದಲ್ಲಿ ಗೊಂದಲ ಮತ್ತು ಬದಲಾವಣೆ ಖಚಿತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಯ ನಂತರ ಕರ್ನಾಟಕದ ರಾಜಕಾರಣದಲ್ಲಿ ಗೊಂದಲ ಮತ್ತು ಬದಲಾವಣೆ ಖಚಿತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ಭಾನುವಾರ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್‌ನಿಂದ ನಾಯಕತ್ವ ಬದಲಾವಣೆಯ ಕುರಿತು ಯಾವುದೇ ನಿಷೇಧವಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ವರಿಷ್ಠರು ಹೇಳಿದ್ದಾರೆ.

ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿರುವುದರಿಂದ ಬದಲಾವಣೆ ಸ್ಪಷ್ಟವಾಗಿದೆ, ಎಂದರು.“ರಾಜ್ಯದ ರಾಜಕೀಯ ಕ್ರಾಂತಿಗೆ ಜಾತಿವಾರು ಸಮೀಕ್ಷೆಯೂ ಕಾರಣವಾಗಿರಬಹುದು ಎಂದು ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ನಡೆಸಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ. ಶಿವಕುಮಾರ್ ಅವರಿಗಿಂತ ಮುಂದಾಳತ್ವ ತೋರಿದ್ದಾರೆ. Daikin 1.5 Ton 3 Star Inverter Split AC (Copper, PM 2.5 Filter, Triple Display, Dew Clean Technology, Coanda Airflow, 2024 Model, MTKL50U, White)

ಇದರಿಂದ ನವೆಂಬರ್‌ನಲ್ಲಿ ಕ್ರಾಂತಿಯ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಸಚಿವರು ಮತ್ತು ಶಾಸಕರೇ ಹೇಳುತ್ತಿದ್ದಾರೆ, ಎಂದು ವಿಜಯೇಂದ್ರ ತಿಳಿಸಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪರಸ್ಪರ ತಿಕ್ಕಾಟದಲ್ಲಿದ್ದಾರೆ. ಆದರೆ, ಶಾಸಕರು ಇವರಿಬ್ಬರ ಸಹವಾಸವನ್ನೇ ಬಯಸುತ್ತಿಲ್ಲ.

ಕಾಂಗ್ರೆಸ್‌ನಲ್ಲಿ ಗೊಂದಲದ ವಾತಾವರಣವಿದೆ, ಎಂದರು. ಜಾತಿವಾರು ಸಮೀಕ್ಷೆಯ ಕುರಿತು ಡಿ.ಕೆ. ಶಿವಕುಮಾರ್‌ರ ಹೇಳಿಕೆಗಳಿಂದ ಗೊಂದಲ ಸ್ಪಷ್ಟವಾಗಿದೆ. ಪೂರ್ವತಯಾರಿಯಿಲ್ಲದೆ ತರಾತುರಿಯಲ್ಲಿ ಸಮೀಕ್ಷೆ ನಡೆಸಿದ್ದು, ಎಲ್ಲಾ ಸಮಾಜಗಳಲ್ಲಿ ಗೊಂದಲವನ್ನುಂಟುಮಾಡಿದೆ.ಇದನ್ನು ಓದಿ:ಖ್ಯಾತ ಸಾಹಿತಿ, ಕಥೆಗಾರ ಡಾ. ಮೊಗಳ್ಳಿ ಗಣೇಶ್ ಇನ್ನಿಲ್ಲ…!!

ಇದಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ, ಎಂದು ಅವರು ಆರೋಪಿಸಿದರು. ಸಿದ್ದರಾಮಯ್ಯನವರಿಗೆ ಈ ಆತುರ ಏಕೆ ಎಂಬುದು ಅರ್ಥವಾಗುತ್ತಿಲ್ಲ. ಸಾಮಾಜಿಕ, ಶೈಕ್ಷಣಿಕ, ಮತ್ತು ಆರ್ಥಿಕ ನ್ಯಾಯ ಕೊಡುವುದು ಬಿಜೆಪಿಯ ನಿಲುವು.

ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು. ಪ್ರಧಾನಿ ಮೋದಿ ದೇಶಾದ್ಯಂತ ಜನಗಣತಿಯೊಂದಿಗೆ ಜಾತಿ ಸಮೀಕ್ಷೆ ಘೋಷಿಸಿದ್ದಾರೆ. ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಅಗತ್ಯವಿರಲಿಲ್ಲ, ಎಂದು ವಿಜಯೇಂದ್ರ ತಿಳಿಸಿದರು.ಇದನ್ನು ಓದಿ:ನಮ್ಮ ಮೆಟ್ರೊಗೆ ‘ಬಸವ ಮೆಟ್ರೊ’ ನಾಮಕರಣ: ಸಿಎಂ ಶಿಫಾರಸು..!