ಮೈಸೂರಿನಲ್ಲಿ ಬಾಲಕಿ ಮೇಲೆ ಅ*ತ್ಯಾಚಾರ ಮತ್ತು ಕೊ*ಲೆ ಕೇಸ್: ಸರ್ಕಾರದ ವಿರುದ್ದ ಪ್ರತಾಪ್ ಸಿಂಹ ಆಕ್ರೋಶ
ಮೈಸೂರು: ಮೈಸೂರಿನಲ್ಲಿ ನಡೆದ ಬಲೂನ್ ಮಾರುವ ಕುಟುಂಬದ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಯಾರೊಬ್ಬರೂ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.Handcuffs Backpacks Vegan Leather Casual Backpack Multipurpose Travelling Bags Daypacks For Men And Women
ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಏಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಿ, ಪೊಲೀಸರಿಗೆ ದಕ್ಷತೆ ಇದೆ ಆದರೆ ಕೆಲಸ ಮಾಡಲು ಮುಕ್ತ ಅವಕಾಶವಿಲ್ಲ ಇಂದು ಪ್ರತಾಪ್ ಸಿಂಹ ಹರಿಹಾಯ್ದಿದ್ದಾರೆ.ಇದನ್ನು ಓದಿ: ಮಹಿಳಾ ವಿಶ್ವಕಪ್ 2025: ಭಾರತ vs ದಕ್ಷಿಣ ಆಫ್ರಿಕಾ: ಭಾರತ 102ಕ್ಕೆ 6 ವಿಕೆಟ್; ಅಬ್ಬರಿಸಿದ ರಿಚಾ ಘೋಷ್(94 ರನ್)
ಮೈಸೂರಿನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸೈಕೋ ಕಾರ್ತಿಕ್ ಅನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು ತಪ್ಪಿಸಿಕೊಳ್ಳುವ ಸಮಯದಲ್ಲಿ ಅವನ ಕಾಲಿಗೆ ಗುಂಡನ್ನು ಹಾರಿಸಿ ವೃತ್ತಿ ಧರ್ಮ ಮೆರೆದಿದ್ದಾರೆ .ಆದರೂ ಎಷ್ಟೇ ಪೊಲೀಸ್ ವ್ಯವಸ್ಥೆ ಬಿಗಿ ಇದ್ದರು, ನ್ಯಾಯಾಂಗ ವ್ಯವಸ್ಥೆ ಉತ್ತಮವಾಗಿದ್ದರೂ ಅದು ಯಾವುದಕ್ಕೂ ಭಯಪಡದೆ ಈ ರೀತಿಯ ನೀಚ ಕೃತ್ಯಗಳನ್ನು ಮಾಡುತ್ತಿರುವ ಇಂತಹ ಕಾಮುಕರ ಹೆಡೆಮುರಿ ಕಟ್ಟಲೇಬೇಕಿದೆ. ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಬೇಕಿದೆ.