ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್ಎಸ್ಎಸ್ ಸಂಘಟನೆ ಕಲಬುರಗಿ ಜಿಲ್ಲಾಡಳಿತ ಮತ್ತು ಚಿತ್ತಾಪುರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದೆ. ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದ ನಿರ್ದೇಶನದಂತೆ ಈ ಮನವಿ ಸಲ್ಲಿಕೆಯಾಗಿದೆ.
ಆರ್ಎಸ್ಎಸ್ ಪಥಸಂಚಲನ ನಡೆಸಲು ಉದ್ದೇಶಿಸಿರುವ ಅದೇ ದಿನ ಮತ್ತು ಸಮಯದಲ್ಲಿ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ಸ್ ಸಹ ಮೆರವಣಿಗೆಗೆ ಅನುಮತಿ ಕೋರಿ ಚಿತ್ತಾಪುರ ತಹಶೀಲ್ದಾರ್ಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿವೆ. ನೀಲಿ ಧ್ವಜ ಮತ್ತು ಲಾಠಿ ಹಿಡಿದು ಮೆರವಣಿಗೆ ನಡೆಸಲು ಅವಕಾಶ ನೀಡುವಂತೆ ಭೀಮ್ ಆರ್ಮಿ ಮನವಿ ಮಾಡಿದೆ. https://dv7jujfts4bjf.cloudfront.net/Untitled design - 2025-10-24T080142.136.png_2025-10-24T02:32:24.619Z
ಇದರ ಜೊತೆಗೆ, ಕುರುಬ ಎಸ್ಟಿ ಕ್ರಿಯಾ ಸಮಿತಿ ಕೂಡ ನವೆಂಬರ್ 2ರಂದು ಪ್ರತಿಭಟನಾ ಕಾರ್ಯಕ್ರಮ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದೆ ಎಂದು ಚಿತ್ತಾಪುರ ತಹಶೀಲ್ದಾರ್ ನಾಗಯ್ಯ ಹಿರೇಮಠ್ ತಿಳಿಸಿದ್ದಾರೆ. ಸೌಹಾರ್ದ ಕರ್ನಾಟಕ ವೇದಿಕೆಯು ನವೆಂಬರ್ 2ರಂದು ಆರ್ಎಸ್ಎಸ್ ಪಥಸಂಚಲನವನ್ನು ನಿಷೇಧಿಸುವಂತೆ ಮನವಿ ಸಲ್ಲಿಸಿದೆ.
ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಿಷೇಧಿಸಿದ್ದನ್ನು ಪ್ರಶ್ನಿಸಿ ಆರ್ಎಸ್ಎಸ್ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ಅರ್ಜಿ ಸಲ್ಲಿಸಿತ್ತು. ನವೆಂಬರ್ 2ರಂದು ಪಥಸಂಚಲನ ನಡೆಸಲು ಸಾಧ್ಯವಾದರೆ, ಅಕ್ಟೋಬರ್ 24ರೊಳಗೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಆರ್ಎಸ್ಎಸ್ಗೆ ಸೂಚಿಸಿತ್ತು. ವಿಮಾನದಲ್ಲಿ "ಬಾಂಬ್" ಎಂದು ಬರೆದು ವ್ಯಕ್ತಿಯ ಹುಚ್ಚಾಟ: ಮಧ್ಯರಾತ್ರಿಯೇ ಲ್ಯಾಂಡ್ ಆದ ವಿಮಾನ!
ಈ ಕುರಿತು ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್, ಪೊಲೀಸರಿಂದ ವರದಿ ಪಡೆದ ನಂತರ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುವುದು ಎಂದಿದ್ದಾರೆ. ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು, ಈ ವಿಷಯದ ಬಗ್ಗೆ ಪೊಲೀಸ್ ಇಲಾಖೆ ಕಾನೂನು ಅಭಿಪ್ರಾಯವನ್ನು ಕೋರಿದೆ ಎಂದು ಮಾಹಿತಿ ನೀಡಿದ್ದಾರೆ.