ಚಿತ್ತಾಪುರ; ಕಲಬುರ್ಗಿಯ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥ ಸಂಚಲನ ನಡೆಸಲು ಅನುಮತಿ ಕೋರಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವೂ (ಆರ್ಎಸ್ಎಸ್) ಸೇರಿದಂತೆ ಸಭೆ/ಸಮಾರಂಭ ಮತ್ತು ಪ್ರತಿಭಟನೆಗೆ ಅನುಮತಿ ಕೋರಿರುವ ಎಲ್ಲಾ ಸಂಘಟನೆಗಳ ಜೊತೆ ಅಕ್ಟೋಬರ್ 28ರಂದು ಶಾಂತಿಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಅಂತೆಯೇ, ಶಾಂತಿ ಸಭೆಯ ನಿರ್ಣಯವನ್ನು ಅಕ್ಟೋಬರ್ 30ಕ್ಕೆ ನ್ಯಾಯಾಲಯಕ್ಕೆ ತಿಳಿಸುವಂತೆ ಆದೇಶಿಸಿದೆ.ಇದನ್ನು ಓದಿ; “ದಿಲ್ಲಿ ಇನ್ನು ದೂರವಿದೆ” ಮಹಾರಾಷ್ಟ್ರದ ಸಿಎಂ ಫಡ್ನಾವಿಸ್ರಿಂದ ಹೇಳಿಕೆ; ಕಾರಣ ಹೀಗಿದೆ
ಚಿತ್ತಾಪುರದಲ್ಲಿ ಅಕ್ಟೋಬರ್ 19ರಂದು ಪಥಸಂಚಲನ ನಡೆಸಲು ಅನುಮತಿ ನಿರಾಕರಿಸಿರುವ ತಹಶೀಲ್ದಾರ್ ಕ್ರಮಕ್ಕೆ ಆಕ್ಷೇಪಿಸಿ ಆರ್ಎಸ್ಎಸ್ ಕಲಬುರ್ಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ರ್ಜಿಯನ್ನು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
"ಅಕ್ಟೋಬರ್ 19ರಂದು ಈ ನ್ಯಾಯಾಲಯವು ವಾಸ್ತವ ಸ್ಥಿತಿಗತಿ ಮತ್ತು ಅರ್ಜಿದಾರರು ಸಲ್ಲಿಸಿರುವ ಮನವಿಯಯನ್ನು ಪರಿಗಣಿಸುವಂತೆ ನಿರ್ದೇಶಿಸಿತ್ತು. ಇದಕ್ಕೆ ಅನುಗುಣವಾಗಿ ಸರ್ಕಾರವು ವರದಿ ಸಲ್ಲಿಸಿದೆ. ಸಭೆ/ಪ್ರತಿಭಟನೆ ನಡೆಸಲು ಸಂಬಂಧಿತ ಪ್ರಾಧಿಕಾರವು ಸಂಘಟನೆಗಳ ಜೊತೆ ಶಾಂತಿಸಭೆ ನಡೆಸಿ, ನಿರ್ಧರಿಸಲಿದೆ. ಅಕ್ಟೋಬರ್ 19ರಿಂದ ಇಲ್ಲಿಯವರೆಗೆ ಚಿತ್ತಾಪುರ ನಗರದಲ್ಲಿ ಒಂದು ರೀತಿಯ ಉದ್ವಿಗ್ನ ಸ್ಥಿತಿಗತಿ ಇದೆ. Safari Flip 32L Casual Printed Backpack, 2 Compartments, Bottle Holder,
ಮಾಧ್ಯಮಗಳಲ್ಲಿ ಹಲವು ಸಂಘಟನೆಗಳು ಪಥಸಂಚಲನದ ಪರ ಮತ್ತು ವಿರೋಧದ ಹೇಳಿಕೆ ನೀಡುತ್ತಿದ್ದು, ಅನುಮತಿಸಿದರೆ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರ ಜೊತೆ ಸ್ಥಳೀಯಾಡಳಿತವು ಶಾಂತಿಸಭೆ ನಡೆಸಲು ನಿರ್ಧರಿಸಿದೆ. ಈ ಸಂಬಂಧಿತ ವರದಿ ಮತ್ತು ವಾದವನ್ನು ಪರಿಗಣಿಸಿ, ಪ್ರತಿವಾದಿ ಸ್ಥಳೀಯಾಡಳಿತವು ಅಕ್ಟೋಬರ್ 28ರಂದು ಶಾಂತಿಸಭೆ ನಡೆಸಬೇಕು. ಆನಂತರ ಅಕ್ಟೋಬರ್ 30ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಾಗುವುದು” ಎಂದು ನ್ಯಾಯಾಲಯ ಆದೇಶಿಸಿದೆ.