Skip to main content
ವಿಡಿಯೋ
1/3
crime

ನೆಲಮಂಗಲದಲ್ಲಿ ರಸ್ತೆ ಗುಂಡಿಯ ದುರಂತ: ಟೆಕ್ಕಿ ಯುವತಿಯ ಜೀವ ಲಾರಿ ಚಕ್ರಕ್ಕೆ ಬಲಿ..!!

By Pavitra Ganapathi Baradavalli
ನೆಲಮಂಗಲದಲ್ಲಿ ರಸ್ತೆ ಗುಂಡಿಯ ದುರಂತ: ಟೆಕ್ಕಿ ಯುವತಿಯ ಜೀವ ಲಾರಿ ಚಕ್ರಕ್ಕೆ ಬಲಿ..!!

ರಸ್ತೆ ಗುಂಡಿಯನ್ನು ತಪ್ಪಿಸಲು ಯತ್ನಿಸಿದ ಟೆಕ್ಕಿಯೊಬ್ಬರು ಲಾರಿ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಸಂಭವಿಸಿದೆ.

ನೆಲಮಂಗಲ: ರಸ್ತೆ ಗುಂಡಿಯನ್ನು ತಪ್ಪಿಸಲು ಯತ್ನಿಸಿದ ಟೆಕ್ಕಿಯೊಬ್ಬರು ಲಾರಿ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಸಂಭವಿಸಿದೆ. ಮೃತ ಯುವತಿಯನ್ನು ಪ್ರಿಯಾಂಕ (26) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಮಹತ್ವದ ತಿರುವು: ಷಡ್ಯಂತ್ರದ ವಿಚಾರಣೆಗೆ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

ಪ್ರಿಯಾಂಕ ತನ್ನ ಸಹೋದರನೊಂದಿಗೆ ಬೈಕ್ನಲ್ಲಿ ಹುಸ್ಕೂರು ಎಪಿಎಂಸಿ ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ರಸ್ತೆ ಕಾಮಗಾರಿಯಿಂದಾಗಿ ರಸ್ತೆಯ ಸ್ಥಿತಿ ಹದಗೆಟ್ಟಿದ್ದು, ಗುಂಡಿಯನ್ನು ತಪ್ಪಿಸಲು ಸಹೋದರ ಯತ್ನಿಸಿದಾಗ, ಯುವತಿ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ.ಇದನ್ನೂ ಓದಿ: ರಷ್ಯಾ ತೈಲದ ಮೇಲೆ ಹೊಸ ನಿರ್ಬಂಧ: ರಿಲಯನ್ಸ್ ಇಂಡಸ್ಟ್ರೀಸ್ ಹೇಳಿಕೆ..!!


ಸಂದರ್ಭದಲ್ಲಿ ಮುಂದೆ ಬಂದ ಲಾರಿಯ ಚಕ್ರಕ್ಕೆ ಯುವತಿಯ ತಲೆ ಸಿಲುಕಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.INDO ERA Women's Straight Linen Floral Printed Kurta & Pant with Dupatta Set (IEOUT10562)