ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಎರಡು ವರ್ಷಗಳ ಬಳಿಕ ಸಂಪುಟ ಪುನಃರಚನೆ ಆಗುತ್ತಿದೆ. ಸರ್ಕಾರ ಬಂದ ಮೇಲೆ ಸಂಪುಟದಿಂದ ಹೊರಗೆ ಇದ್ದವರಿಗೆ ಅವಕಾಶ ಕೊಡಬೇಕೆಂದು ನಿರ್ಧಾರವಾಗಿದೆ. ಇದಕ್ಕೆ ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ನಾಯಕತ್ವ ಬದಲಾವಣೆ ಹೈಕಮಾಂಡ್ಗೆ ಬಿಟ್ಟಿದೆ. ಸಚಿವ ಸಂಪುಟ ಪುನರ್ ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಸಂತೃಪ್ತಿ ಇದೆ. ಆದರೆ ಕೆಲಸದಲ್ಲಿ ಅಲ್ಲ. ಇನ್ನೂ ಮಾಡುವ ಕೆಲಸ ಬಾಕಿ ಇದೆ. ರಾಜಕೀಯ ಮಾತನಾಡಲು ಪಕ್ಷದ ಚೌಕಟ್ಟಿದೆ ಆಯ್ಕೆ ಮಾಡಿದೆ ಕಾಲಕಾಲಕ್ಕೆ ತೀರ್ಮಾನ ಮಾಡುತ್ತದೆ. ಒಬ್ಬಬ್ಬರದು ಒಂದು ಅಭಿಪ್ರಾಯ ಇರುತ್ತದೆ ಐದು ಬೆರಳು ಸಮ ಇರುವುದಿಲ್ಲ ಎಂದು ನುಡಿದಿದ್ದಾರೆ. Noise Diva 2 Fashion Smart Watch for Women - Sleekest Dial, 36mm AMOLED Display, Snug Fit, Improved Female Cycle Tracker, BT Calling, Sleep Tracking, AI Voice Assistant, Password Protection-Rose Link
ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಷಯಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಮುಖ್ಯಮಂತ್ರಿಗಳು ಜವಾಬ್ದಾರಿ, ಕೆಲಸ ಕೊಟ್ಟಿದ್ದಾರೆ. ಮತ್ತೊಂದೆಡೆ, ರಾಜಕೀಯ ಮಾತನಾಡಿ ಬೇಳೆ ಬೇಯಿಸಿಕೊಳ್ಳುವ ಬಿಜೆಪಿಗರಿಗೆ ಬೇರೆ ಕೆಲಸವಿಲ್ಲ ಎಂದವರು ಟೀಕಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪರ್ವೇಜ್ ಮುಷರಫ್ ಅಧಿಕಾರಾವಧಿಯಲ್ಲಿ ಪಾಕ್ ಶಸ್ತ್ರಾಸ್ತ್ರಗಳ ನಿಯಂತ್ರಣವನ್ನು ಅಮೆರಿಕಾಗೆ ನೀಡಲಾಗಿತ್ತು - ಮಾಜಿ CIA ಅಧಿಕಾರಿಯಿಂದ ಸ್ಪೋಟಕ ಮಾಹಿತಿ!