ಬೆಂಗಳೂರು: ನಗರದಲ್ಲಿ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುವ ಕುರಿತು ಕುಮಾರಸ್ವಾಮಿ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ನಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಮಾತನಾಡುವ ವೇಳೆ ಡಿಕೆಶಿ ಈ ವಿಷಯವನ್ನು ಎತ್ತಿದರು.ಇದನ್ನೂ ಓದಿ: ಪತಿಯೊಂದಿಗೆ ಜಗಳ ಮಾಡಿ ತವರು ಮನೆಗೆ ಹೋದ ಮಹಿಳೆಯ ಅವಳಿ ಮಕ್ಕಳ ಕತ್ತು ಸೀಳಿ ಕೊಂದ ತಂದೆ..!
ಈ ಸಂದರ್ಭದಲ್ಲಿ ಒಬ್ಬ ನಾಗರಿಕರು, ಸರ್ಕಾರವು ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕಾರ್ಯ. ಈ ಬದಲಾವಣೆಗಾಗಿ ಹಲವರು ವರ್ಷಗಳಿಂದ ಕಾಯುತ್ತಿದ್ದರು, ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ ಪ್ರಶಂಸಿದರು.ಇದನ್ನೂ ಓದಿ: ಆರ್ಎಸ್ಎಸ್ ಒಂದು ರಬ್ಬರ್ ಬಾಲ್ನಂತೆ: ಹೊಡೆದಷ್ಟು ಇನ್ನಷ್ಟು ಜೋರಾಗಿ ಹೊರಬೀಸುತ್ತದೆ – ಡಾ. ರಾಮ್ ಮಾಧವ್.
ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಎ ಖಾತಾ ಎನ್ನುವುದು ನಿಮ್ಮ ಆಸ್ತಿಯ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ಕೇವಲ 5% ಅಭಿವೃದ್ಧಿ ಶುಲ್ಕವನ್ನು ಮಾತ್ರ ಪಾವತಿಸುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರಿಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದಗಳು, ಎಂದು ನಮನ ಸಲ್ಲಿಸಿದರು.INDO ERA Women's Embroidered Pure Cotton Kurta Pant With Dupatta Set (Kh0Ph6072)