Skip to main content
ವಿಡಿಯೋ
1/3
metro

ಡಿಸಿಎಂ ಡಿಕೆ ಶಿವಕುಮಾರ್ - ಕಬ್ಬನ್ ಉದ್ಯಾನ ಅಭಿವೃದ್ಧಿ ಜೊತೆಗೆ ಹೈಕೋರ್ಟ್ ಸ್ಥಳಾಂತರದ ಬಗ್ಗೆ ಪ್ರಸ್ತಾಪ

By Shravanthi R
ಡಿಸಿಎಂ ಡಿಕೆ ಶಿವಕುಮಾರ್ - ಕಬ್ಬನ್ ಉದ್ಯಾನ ಅಭಿವೃದ್ಧಿ ಜೊತೆಗೆ ಹೈಕೋರ್ಟ್ ಸ್ಥಳಾಂತರದ ಬಗ್ಗೆ ಪ್ರಸ್ತಾಪ

ರಾಜ್ಯ ರಾಜಧಾನಿ ಬೆಂಗಳೂರಿನ ಹೆಗ್ಗುರುತಾಗಿರುವ ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ಪ್ರಮುಖ ಉದ್ಯಾನವನಗಳು. ಇದೀಗ ಕಬ್ಬನ್ ಪಾರ್ಕ್ ಅಭಿವೃದ್ಧಿ ಮಾಡಲಾಗುವುದೆಂದು ತಿಳಿಸಲಾಗಿದೆ. ಇದರೊಟ್ಟಿಗೆ, ಹೈ ಕೋರ್ಟ್ ಸ್ಥಳಾಂತರದ ವಿಚಾರವಾಗಿ ಮಾಹಿತಿ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಬ್ಬನ್ ಉದ್ಯಾನ ಅಭಿವೃದ್ಧಿ ಜೊತೆಗೆ ಹೈಕೋರ್ಟ್ ಸ್ಥಳಾಂತರದ ಬಗ್ಗೆ ಮಾಹಿತಿ ಒದಗಿಸಿದ್ದಾರೆ. ಕಬ್ಬನ್ ಪಾರ್ಕ್ ನಲ್ಲಿ ಇಂದು ನಡೆದ ನಡಿಗೆ ಕಾರ್ಯಕ್ರಮದಲ್ಲಿ ನಾಗರೀಕರ ಜೊತೆ ಸಂವಾದ ನಡೆಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು.

ಉದ್ಯಾನವನದ ಉನ್ನತೀಕರಣಕ್ಕೆ ನಾಗರಿಕರು ಬೇಡಿಕೆ ಇಟ್ಟಿದ್ದು, ಬಿಡಿಎಯಿಂದ 5 ಕೋಟಿ ರೂಪಾಯಿ ಹಣದಲ್ಲಿ ಅಭಿವೃದ್ಧಿ ಮಾಡಲಾಗುವುದು ಹಾಗೂ ಅಗತ್ಯ ಉಳಿದ ಅನುದಾನವನ್ನು ತೋಟಗಾರಿಕೆ ಇಲಾಖೆಗೆ ಬಿಡುಗಡೆ ಮಾಡಲು ಸೂಚಿಸಲಾಗುವುದು. ಉದ್ಯಾನದ ಆವರಣದಲ್ಲಿ ಯಾವುದೇ ರೀತಿಯ ನಿರ್ಮಾಣ ಕೆಲಸಗಳಿಗೆ ಆಸ್ಪದ ನೀಡದೇ, ಉದ್ಯಾನಗಳ ರಕ್ಷಣೆ ಆಗಬೇಕೆಂದು ತಿಳಿಸಿದ್ದಾರೆ. 

“ವಿದ್ಯಾರ್ಥಿ ನಾಯಕನಾಗಿದ್ದಾಗಿಂದಲೂ ಇಲ್ಲಿ ಬಂದು ಸಮಯ ಕಳೆಯುತ್ತಿದ್ದೆ ಕಬ್ಬನ್ ಪಾರ್ಕ್ ಹಾಗೂ ಲಾಲ್ಬಾಗ್ ಮಾದರಿಯಲ್ಲಿ ಅರಣ್ಯ ಇಲಾಖೆಯ ಜೊತೆ ಮಾತನಾಡಿ ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳಲ್ಲಿ ಉದ್ಯಾನವನಗಳ ಅಭಿವೃದ್ಧಿ ಮಾಡಿ ʻಟ್ರೀ ಪಾರ್ಕ್ʼ ಸ್ಥಾಪಿಸುವ ನಿರ್ಧಾರ ಮಾಡಲಾಗಿದೆ. ಯಾವುದೇ ಮರಗಳನ್ನು ಕಡಿಯುವುದಿಲ್ಲ. ಹಸಿರಿನ ರಕ್ಷಣೆಗೆ ಮುಂದಾಗಿದ್ದು, 10 ಕೋಟಿ ರೂಪಾಯಿಯಲ್ಲಿ ಲಾಲ್ಬಾಗ್ ಉದ್ಯಾನ ಅಭಿವೃದ್ಧಿ ಘೋಷಣೆಯಾಗಿದೆ ಎಂದು ತಿಳಿಸಿದರು. Fujifilm Instax Camera Mini 99 Premium Edition Pack with 20 Shots

ಇದೇ ವೇಳೆ, ಹೈ ಕೋರ್ಟ್ ಸ್ಥಳಾಂತರಕ್ಕೆ ಸ್ಥಳ ಪರಿಶೀಲನೆ ಮಾಡಲಾಗಿದ್ದು, ನ್ಯಾಯಾಲಯದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹತ್ತಿರದಲ್ಲಿ ಸ್ಥಳಾವಕಾಶ ದೊರೆಯಬಹುದು ಎಂದು ತಿಳಿಸಲಾಗಿದೆ. ಹಳೆಯ ಐತಿಹಾಸಿಕ ಕಟ್ಟಡವಾದ ಕಾರಣಕ್ಕೆ ಹೈಕೋರ್ಟ್ ಸ್ಥಳಾಂತರಕ್ಕೆ 15 ರಿಂದ 20 ಎಕರೆ ಜಾಗ ನೀಡಿ ಎಂದು ವಕೀಲರು ಮುಖ್ಯ ನ್ಯಾಯಮೂರ್ತಿಗಳು ಮನವಿ ಮಾಡಿದ್ದರು. ಸರ್ಕಾರದ ಮುಂದೆಯೂ ಇದರ ಬಗ್ಗೆ ಚರ್ಚೆ ನಡೆಸಲಾಗುವುದು ಇಂದು ಹೇಳಿದ್ದಾರೆ. ಇದನ್ನೂ ಓದಿ: 2020 ರ ದೆಹಲಿ ಗಲಭೆ: ಸೋಮವಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಇನ್ನುಳಿದವರ ಜಾಮೀನು ಅರ್ಜಿಗಳ ಸುಪ್ರೀಂ ಕೋರ್ಟ್‌ ವಿಚಾರಣೆ