Skip to main content
ವಿಡಿಯೋ
1/3
cinema

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಗೌಡ ಪುನರ್ ಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‍ನಲ್ಲಿ ವಜಾ

By Ram Chethan
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಗೌಡ ಪುನರ್ ಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‍ನಲ್ಲಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಗೌಡ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಈಗಾಗಲೇ ರದ್ದುಪಡಿಸಿದ ಪೀಠ, ಮತ್ತೊಮ್ಮೆ ಪರಿಶೀಲನೆ ಅಗತ್ಯವಿಲ್ಲವೆಂದು ಸ್ಪಷ್ಟಪಡಿಸಿದೆ. ಇದರಿಂದ ಹಿಂದಿನ ಸುಪ್ರೀಂ ಕೋರ್ಟ್ ಆದೇಶವೇ ಜಾರಿಯಲ್ಲಿರಲಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಗೌಡ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಹಿಂದೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಈಗಾಗಲೇ ರದ್ದುಪಡಿಸಿತ್ತು. ಆ ಆದೇಶವನ್ನು ಮರುಪರಿಶೀಲಿಸಬೇಕೆಂದು ಪವಿತ್ರಗೌಡ ಪುನರ್ ಪರಿಶೀಲನಾ ಅರ್ಜಿ ಹಾಕಿದ್ದರು.SWISS MILITARY Valise LTB5A 28L Trolley Briefcase Cum Laptop Backpack | Travel Bag with Rain Cover, Laptop Compartment & Trolley Wheels | Black Office Cabin Bag for Men | Convertible & Durable Design

ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠವಾದ ನ್ಯಾಯಮೂರ್ತಿ ಜೆ.ಬಿ. ಪರ್ಧಿವಾಲ್ ಮತ್ತು ಆರ್. ಮಹಾದೇವನ್ ಅವರ ಪೀಠ ಇಂದು ವಿಚಾರಣೆ ನಡೆಸಿ ಅರ್ಜಿಯನ್ನು ವಜಾಗೊಳಿಸಿದೆ.ಇದನ್ನು ಓದಿ:ಜೈಲಿನಲ್ಲಿ ರೇಪಿಸ್ಟ್‌ ಉಮೇಶ್‌ ರೆಡ್ಡಿಗೆ TV, ಮೊಬೈಲ್‌, ಬೇಕಾದ ಊಟ....ದರ್ಶನ್‌ಗೆ ಯಾಕಿಲ್ಲ? ಪಾಪ ದಾಸ!

ಪೀಠ ತನ್ನ ಅಭಿಪ್ರಾಯದಲ್ಲಿ, “ನಾವು ಹಿಂದೆಯೇ ಎಲ್ಲಾ ದಾಖಲೆಗಳು ಮತ್ತು ತೀರ್ಪನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

ಈ ಮೂಲಕ, ಹೈಕೋರ್ಟ್ ಜಾಮೀನನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶವೇ ಮುಂದುವರಿಯಲಿದೆ.