ಬೆಂಗಳೂರು; ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿಸಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಹಾಗೂ ಪ್ರಕರಣದ ಸಂಬಂಧಿತ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದೆ.PALAY® Straw Hat Sun Hats for Women,Wide Brim Cap Beach Hat for Women Stylish UV Protection Cap
ಸದ್ಯದ ವಾದ ವಿವಾದ;
ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರ ವಿಭಾಗೀಯ ಪೀಠವು ಮೇಲ್ಮನವಿಗಳ ವಿಚಾರಣೆ ನಡೆಸಲಿದೆ.
ವಿಚಾರಣೆ ಆರಂಭ. ಮೇಲ್ಮನವಿದಾರರ ಪರ ವಕೀಲ ಶತಭಿಷ್ ಶಿವಣ್ಣ: ಪ್ರಕರಣದಲ್ಲಿ ವಾದಿಸುವ ಹಿರಿಯ ವಕೀಲರು ದೆಹಲಿಯಿಂದ ಬರಬೇಕಿದ್ದು, ಕಾಲಾವಕಾಶ ನೀಡಬೇಕು ಎಂದು ಕೋರಿಕೆ. ಇದಕ್ಕೆ ಒಪ್ಪಿದ ಪೀಠವು ಮೇಲ್ಮನವಿಗಳ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿತು.ಇದನ್ನು ಓದಿ; ಮಹಿಳೆ ಮೇಲೆ ವ್ಯಕ್ತಿಯಿಂದ ಹಲ್ಲೆ – ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು
ಪ್ರಕರಣದ ಹಿನ್ನೆಲೆ: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಈ ಹಿಂದೆ ಹೈಕೋರ್ಟ್ ಎತ್ತಿ ಹಿಡಿದಿತ್ತು.
ಸಿಎಂ ಮೇಲ್ಮನವಿ: ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.