Skip to main content
ವಿಡಿಯೋ
1/3
general

ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು - ದೆಹಲಿಯಿಂದ ಆಗಮಿಸಿ ಆಸ್ಪತ್ರೆಗೆ ತೆರಳಿ ಪತ್ನಿಯ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

By Shravanthi R
ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು - ದೆಹಲಿಯಿಂದ ಆಗಮಿಸಿ ಆಸ್ಪತ್ರೆಗೆ ತೆರಳಿ ಪತ್ನಿಯ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯಸ್ಥಿತಿಯಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರು ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಅನಾರೋಗ್ಯ ಸಮಸ್ಯೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರು, ದೆಹಲಿ ಪ್ರವಾಸದಿಂದ ದಿಢೀರನೆ ಆಗಮಿಸಿ, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರ ಆರೋಗ್ಯ ವಿಚಾರಿಸಿದ ನಂತರ, ಅರ್ಧ ಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಅವರು, ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದರು. ಈ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಶ್ವಾಸಕೋಶ ಸೋಂಕು ಇದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಆಗಿಲ್ಲ, ಈಗ ಸುಧಾರಣೆ ಕಾಣುತ್ತಿದೆ. ಇನ್ನೂ ಎರಡು ಮೂರು ದಿನಗಳು ಆಸ್ಪತ್ರೆಯಲ್ಲೇ ಇರಬೇಕಾಗುತ್ತದೆ.” ಎಂದಿದ್ದಾರೆ ಎನ್ನಲಾಗಿದೆ. Samsung Galaxy M17 5G (Sapphire Black, 6GB RAM, 128GB Storage)| 50MP OIS Triple Camera| Gorilla Glass Victus| IP54 Rating| 6 Gen of OS Upgrades| AI| Circle to Search| Gemini Live| Without Charger

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ - 

ಈ ಬಗ್ಗೆ, ಸಿಎಂ ಅವರ ಪುತ್ರ ಹಾಗೂ ವಿಧಾನಪರಿಷತ್‌ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದು. ಡಾಕ್ಟರ್ ಬಿ ಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡವು ಐಸಿಯುನಲ್ಲಿರುವ ಪಾರ್ವತಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ನಾಳೆಯವರೆಗೂ ನಿಗಾವಹಿಸಲು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ಕಾಯ್ದಿರಿಸಲಾಗಿದೆ. ಇದನ್ನೂ ಓದಿ: Heart Transplantation: ಮತ್ತೊಮ್ಮೆ ಮೆಟ್ರೋಗೆ ಆಭಾರಿ; 15 ನಿಮಿಷದಲ್ಲಿ ರಾಗಿಗುಡ್ಡದಿಂದ ಬೊಮ್ಮಸಂದ್ರಕ್ಕೆ ಅಂಗಾಂಗ ರವಾನೆ!