Skip to main content
ವಿಡಿಯೋ
1/3
weather

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ - ತಮಿಳುನಾಡು, ಕೇರಳ ಹಾಗೂ ಕರ್ನಾಟಕಕ್ಕೆ ಭಾರಿ ಮಳೆ ಮುನ್ಸೂಚನೆ - ಹವಾಮಾನ ಇಲಾಖೆ ವರದಿ

By Shravanthi R
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ - ತಮಿಳುನಾಡು, ಕೇರಳ ಹಾಗೂ ಕರ್ನಾಟಕಕ್ಕೆ ಭಾರಿ ಮಳೆ ಮುನ್ಸೂಚನೆ - ಹವಾಮಾನ ಇಲಾಖೆ ವರದಿ

ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಹವಾಮಾನದ ವ್ಯತಿರಿಕ್ತ ಪರಿಸ್ಥಿತಿಯಿಂದಾಗಿ, ತಮಿಳುನಾಡು, ಕೇರಳ ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಹಾಗೂ ತಾಪಮಾನ ಕುಸಿತದ ಛಾಯೆ ಕಾಣಿಸಿಕೊಳ್ಳುತ್ತಿವೆ ಎನ್ನಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಂಡಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ವರದಿ ತಿಳಿಸಿದೆ.

ಈ ಕುರಿತಾಗಿ ಭಾರತೀಯ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ನೀಡಿದ್ದು, ಪ್ರಮುಖವಾಗಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಕಲಬುರಗಿ, ಬೀದರ್ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ ಸೂಚಿಸಿದೆ. realme 14x 5G Smartphone 8+128GB red, 6.67-inch Screen, 120Hz Display, 6000mAh Battery, 80MP, MediaTek Dimensity 6300, ArmorShell Protection, IP69

ಮುಂದಿನ 24 ರಿಂದ 48 ಗಂಟೆಗಳಲ್ಲಿ ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಗಾಳಿ - ಮಳೆ ಪ್ರಭಾವ ಬೀರಲಿದ್ದು, ಕರಾವಳಿ ಪ್ರದೇಶಗಳು, ಉತ್ತರ ಕರ್ನಾಟಕ ಭಾಗಗಳು ಸೇರಿದಂತೆ ಬೆಂಗಳೂರಿನ ಹವಾಮಾನದ ಮೇಲೆಯೂ ವ್ಯತಿರಿಕ್ತ ವಾತಾವರಣ ಉಂಟಾಗಲಿದೆ ಎಂದು ಮಾಹಿತಿ ತಿಳಿಸಲಾಗಿದೆ. ಇದನ್ನೂ ಓದಿ: New Labour Codes - ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳು ಜಾರಿ - ನ.26 ಕ್ಕೆ ವಿರೋಧಿತ ಪ್ರತಿಭಟನೆ!