Skip to main content
ವಿಡಿಯೋ
1/3
politics

ಅಧಿಕಾರ ಹಸ್ತಾಂತರ ಕಿತ್ತಾಟದಿಂದ ಆಡಳಿತ ನಿಷ್ಕ್ರಿಯವಾಗಿದೆ, ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಯಾರೆಂದು ಸ್ಪಷ್ಟಪಡಿಸಬೇಕು - ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿಕೆ!

By Shravanthi R
ಅಧಿಕಾರ ಹಸ್ತಾಂತರ ಕಿತ್ತಾಟದಿಂದ ಆಡಳಿತ ನಿಷ್ಕ್ರಿಯವಾಗಿದೆ, ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಯಾರೆಂದು ಸ್ಪಷ್ಟಪಡಿಸಬೇಕು - ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿಕೆ!

ರಾಜ್ಯ ರಾಜಕೀಯ ಪರ್ಯಟನೆಗೆ ಕಾರಣವಾಗಿರುವ ಸಿಎಂ ಸ್ಥಾನ ಯಾರಿಗೆ ಎಂಬ ಚರ್ಚೆ ವಿಚಾರವಾಗಿ, ಜನರು ದಿನಬೆಳಗಾದ್ರೆ ಕೇಳಿ ಕೇಳಿ ಬೇಸತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ನಡುವಿನ ಅಧಿಕಾರ ಹಸ್ತಾಂತರ ವಿಚಾರವಾಗಿ ಸರ್ಕಾರದ ಕೆಲಸಗಳು ವಿಳಂಬವಾಗುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ. ಈ ಬಗ್ಗೆ ಮುಂದಿನ ಸಿಎಂ ಯಾರೆಂದು ಪಕ್ಷದ ಹೈಕಮಾಂಡ್‌ ಸ್ಪಷ್ಟಪಡಿಸಬೇಕೆಂದು ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಹುದ್ದೆ ಯಾರಿಗೆಂದು ಹುಟ್ಟಿಕೊಂಡಿರುವ ವಾದಗಳಿಂದ ಆಡಳಿತ ಯಂತ್ರವು ನಿಷ್ಕ್ರಿಯವಾಗಿದೆ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಧಾರ ತೆಗೆದುಕೊಳ್ಳದಿದ್ದರೆ, ಸರ್ಕಾರದ ಕೆಲಸಗಳು ನಡೆಯುವುದಿಲ್ಲ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ರಾಜ್ಯಪಾಲರ ಗಮನಕ್ಕೆ ತರುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. Vivo T4 Lite 5G Titanium Gold_128GB+6GB

ಇವರ ಅಧಿಕಾರ ಕಿತ್ತಾಟದಿಂದಾಗಿ ರಾಜ್ಯದ ಜನರು ಬಳಲುತ್ತಿದ್ದಾರೆ. ದಿನಬೆಳಗಾದರೆ ಜನರು ನೋಡಿ ನೋಡಿ ಬೇಸತ್ತಿದ್ದಾರೆ. ಸರ್ಕಾರದ ಕೆಲಸಗಳು ಸ್ಥಗಿತಗೊಂಡರೆ ಯಾರು ಹೊಣೆ? ರಾಜ್ಯದ ಮುಖ್ಯಮಂತ್ರಿ ಯಾರೆಂಬ ಪ್ರಶ್ನೆ ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ಸ್ಪೋಟ ಪ್ರಕರಣ - 5 ವೈದ್ಯರಿಂದಲೇ 26 ಲಕ್ಷ ರೂ. ಫಂಡಿಂಗ್‌ - ಮತ್ತೋರ್ವ ಶಂಕಿತ ಉಗ್ರನ ಬಂಧನ!