ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ವಿರುದ್ದ ನಡೆಸಿದ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಸೌಜನ್ಯಪರ ನ್ಯಾಯ ಹೋರಾಟಗಾರ ಮಹೇಶ್ಶೆಟ್ಟಿ ತಿಮರೋಡಿ ಸೇರಿದಂತೆ ಮತ್ತಿತರರ ಚಲನವಲನದ ಕುರಿತು ತನಿಖೆ ನಡೆಸಲು ನಿರ್ದೇಶನ ಕೋರಿರುವ ಅರ್ಜಿ ಸಂಬಂಧ ಉತ್ತರಿಸಬೇಕೆಂದು ಕರ್ನಾಟಕ ರಾಜ್ಯದ ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಧರ್ಮಸ್ಥಳ ಪ್ರಕರಣದಲ್ಲಿ ಭಾಗಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ.ಜಯಂತ್ ಹಾಗೂ ಯೂಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಹಣಕಾಸಿನ ಮೂಲಗಳು ಹಾಗೂ ಚಟುವಟಿಕೆಗಳ ಸಂಬಂಧ ದೂರಿದ್ದ ಕ್ರಮಗಳ ಬಗ್ಗೆ ಸಮಗ್ರ ವರದಿ ನೀಡಲು