ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಕೆಲವು ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ₹82 ಲಕ್ಷ ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡುವಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.Reebok Men's Sneakers - Streetcourt Efficient - Casual Sneakers for Men, Stylish Everyday Wear Shoes
ಈ ಮೊತ್ತವನ್ನು ಪೊಲೀಸರೇ ದರ್ಶನ್ನಿಂದ ಸಾಕ್ಷ್ಯ ಸಂಗ್ರಹಣೆಯ ವೇಳೆ ವಶಪಡಿಸಿಕೊಂಡಿದ್ದರು. ಬಳಿಕ, ಈ ಹಣ ತಮ್ಮ ವಶಕ್ಕೆ ಬರಬೇಕೆಂದು ಐಟಿ ಇಲಾಖೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಸೆಷನ್ಸ್ ಕೋರ್ಟ್ ಐಟಿ ಇಲಾಖೆಯ ಅರ್ಜಿಯನ್ನು ಅಂಗೀಕರಿಸಿದ್ದು, ಹಣವನ್ನು ಅಧಿಕೃತವಾಗಿ ಅವರ ವಶಕ್ಕೆ ನೀಡಲು ಅನುಮತಿ ನೀಡಿದೆ.ಇದನ್ನು ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್–ಪವಿತ್ರಾ ಗೌಡ ಸೇರಿ 17 ಮಂದಿಗೆ ಇಂದು ವಿಚಾರಣೆ
ಇಂದು ದರ್ಶನ್ ಸೇರಿ ಏಳು ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಕೋರ್ಟ್ನಲ್ಲಿ ಹಾಜರಾಗಿದ್ದರು. ಕೋರ್ಟ್ನಲ್ಲಿ ಪ್ರಾಥಮಿಕ ವಿಚಾರಣೆ ನಡೆದಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಂದಿನ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಯೊಂದು ಬೆಳವಣಿಗೆಯೂ ಗಮನ ಸೆಳೆಯುತ್ತಿದ್ದು, ಮುಂದಿನ ವಿಚಾರಣೆ ಹೇಗಿರುತ್ತದೆ ಎಂಬುದರ ಕಡೆ ಎಲ್ಲರ ದೃಷ್ಟಿ ನೆಟ್ಟಿದೆ.