ದೇಶದಲ್ಲಿ ಸೈಬರ್ ಭದ್ರತೆ ಮತ್ತು ಮಾಹಿತಿ ದತ್ತಾಂಶ ಸೋರಿಕೆಯನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರದ ನೌಕರರಿಗೆ ಕೃತಕಬುದ್ದಿಮತ್ತೆ ಹಾಗೂ ಚಾಟ್ಜಿಪಿಟಿಯಂತಹ ತಂತ್ರಜ್ಞಾನವನ್ನು ಬಳಸಬೇಡಿ ಎಂದು ಕಟ್ಟುನಿಟ್ಟಿನ ನಿರ್ದೇಶನ ಸೂಚಿಸಿದೆ ಎಂದು ತಿಳಿಸಲಾಗಿದೆ.
ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜಿತಿನ್ ಪ್ರಸಾದ್ ಅವರು, ಈ ಕುರಿತು ವಿವರಿಸಿದರು. ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಇಂತಹ ತಾಂತ್ರಿಕ ವೇದಿಕೆಗಳಲ್ಲಿ ಸರ್ಕಾರದ ಅಧಿಕೃತ ಮಾಹಿತಿ ಮತ್ತು ದತ್ತಾಂಶಗಳನ್ನು ಹಂಚಿಕೊಳ್ಳಬಾರದು. ಈ ಕುರಿತು ಆದೇಶ ಹೊರಡಿಸಲಾಗಿದೆ ಹಾಗೂ ಸರ್ಕಾರವು ಪಟ್ಟಬದ್ದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ಅವರು ತಿಳಿಸಿದ್ದಾರೆ. Stokke Clikk Highchair, Clover Green - Suitable for Kids from 6 Months to 3 Years, Ergonomic, Light & Travel Friendly, for Feeding & Sitting
ಸರ್ಕಾರಕ್ಕೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಹಾಗೂ ದತ್ತಾಂಶಗಳನ್ನು ಸುಧಾರಿಸುವ ಉದ್ದೇಶದಿಂದ ಅಧಿಕಾರಿಗಳು ಇವುಗಳನ್ನು ಬಳಸಿಕೊಳ್ಳುತ್ತಿದ್ದು, ಇದರಿಂದಾಗಿ ದೇಶದ ಆತಂರಿಕ ಮಾಹಿತಿ ಸೋರಿಕೆಯುಂಟಾಗಬಹುದು ಎಂಬ ಆತಂಕ ವ್ಯಕ್ತಪಡಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ತಂತ್ರಜ್ಞಾನ ಅಭಿವೃದ್ಧಿಯಲ್ಲಿ TRL ಹಂತಗಳ ಮಹತ್ವವೇನು ಗೊತ್ತಾ!?