ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್ ಅವರು ಗೆಲುವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಇನ್ನೂ ಗೆಲುವಿನ ಖುಷಿಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ವಾಸ್ತವಕ್ಕೆ ಮರಳುವುದು ಕಷ್ಟವಾಗುತ್ತಿದೆ ಎಂದು ಹೇಳುವ ಮೂಲಕ ತಮ್ಮ ಮನಸ್ಸಿನ ಸ್ಥಿತಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.Puma Unisex-Child Softride Premierslip-onjrres Sneaker
ವಿಡಿಯೋದಲ್ಲಿ ಗಿಲ್ಲಿ ನಟರಾಜ್, ಬಿಗ್ ಬಾಸ್ ಮನೆಯೊಳಗೆ ಇರುವಾಗ ಇಷ್ಟೊಂದು ಜನರಿಂದ ಬೆಂಬಲ ಸಿಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ತಮ್ಮನ್ನು ಬೆಂಬಲಿಸಿದ ಅಭಿಮಾನಿಗಳು, ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರೋತ್ಸಾಹ ನೀಡಿದ ಎಲ್ಲರಿಗೂ ಅವರು ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಟ್ಯಾಟೂ ಹಾಕಿಸಿಕೊಂಡವರು ಮತ್ತು ಹರಕೆ ಹೊತ್ತವರನ್ನೂ ವಿಶೇಷವಾಗಿ ನೆನಪಿಸಿಕೊಂಡಿದ್ದಾರೆ.ಇದನ್ನು ಓದಿ:‘ಟಾಕ್ಸಿಕ್’ ಟೀಸರ್ ಆಯ್ತು, ಟ್ರೇಲರ್ ಯಾವಾಗ? ವರದಿ ಪ್ರಕಾರ ಈ ದಿನಾಂಕ ಫಿಕ್ಸ್!
ಗೆಲುವಿನ ನಂತರ ಹುಟ್ಟೂರಿನಲ್ಲಿ ರ್ಯಾಲಿ ನಡೆಸಿದ ಗಿಲ್ಲಿ, ನಂತರ ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದರು. ಈಗ ಈ ವಿಡಿಯೋ ಮೂಲಕ ಅವರು ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಕುತೂಹಲ ಮೂಡಿಸುವ ಸಂದೇಶ ನೀಡಿದ್ದಾರೆ. “ಈ ಗೆಲುವಿನ ನಂತರ ಹೊಸ ದಾರಿ ಕಡೆ ಹೆಜ್ಜೆ ಇಡುವ ಸಮಯ ಬಂದಿದೆ” ಎಂದು ಅವರು ಹೇಳಿದ್ದಾರೆ.
ಈ ಹೇಳಿಕೆಯಿಂದ ಗಿಲ್ಲಿ ನಟರಾಜ್ ಮುಂದಿನ ದಿನಗಳಲ್ಲಿ ಹೊಸ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎನ್ನುವ ಚರ್ಚೆ ಶುರುವಾಗಿದೆ. ವಿಶೇಷವಾಗಿ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬಹುದೆಂಬ ಊಹಾಪೋಹಗಳು ಹರಡಿವೆ. ಒಟ್ಟಿನಲ್ಲಿ, ಗಿಲ್ಲಿ ನಟರಾಜ್ ಅವರ ಮುಂದಿನ ಹೆಜ್ಜೆ ಏನಾಗಲಿದೆ ಎಂಬುದನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.