ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಮತ್ತು ಅದರ ಬಳಿಕ ನಡೆದಿರುವುದಾಗಿ ಹೇಳಲಾಗುತ್ತಿರುವ ಲಾಠಿಚಾರ್ಜ್ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಹಾಗೂ ಕಡಬಗೆರೆ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಅನೇಕ ಕಡೆ ಅಂಗಡಿ-ಮುಂಗಟ್ಟುಗಳು ಮುಚ್ಚಿ ಜನರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಡಬಗೆರೆಯಲ್ಲಿ ನಿನ್ನೆ ದಿನವಿಡೀ ಪ್ರತಿಭಟನೆ ನಡೆದಿದ್ದು, ಸಂಜೆ ಪರಿಸ್ಥಿತಿ ಉದ್ವಿಗ್ನವಾಗಿದೆಯೆಂದು ವರದಿಯಾಗಿದೆ.Arayna Women's Cotton Printed Floral Straight Kurta with Palazzo